ಚಿಕ್ಕಬಳ್ಳಾಪುರ: ಉರ್ದು ಭಾಷೆ ಬೆಳೆಸಿ ಅಭಿವೃದ್ಧಿ ಪಡಿಸುವುದಕ್ಕಾಗಿ ಉರ್ದು ಅಕಾಡೆಮಿ ವತಿಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಉರ್ದು ಶಾಲೆಗಳ ದಾಖಲಾತಿ ಹೆಚ್ಚಳವಾಗಬೇಕು ಗುಡಿಬಂಡೆ ಪಟ್ಟಣದಲ್ಲಿ ಉರ್ದು ಅಂಗನವಾಡಿಗಳ ಸ್ಥಾಪನೆ ಮಾಡಬೇಕೆಂದು ಕರ್ನಾಟಕ ಉರ್ದು ಅಕಾಡೆಮಿ ಅಧ್ಯಕ್ಷ ಮೌಲಾನ ಮುಫ್ತಿ ಮಹಮದ್ ಅಲಿಖಾಜಿ ತಿಳಿಸಿದರು.
ಗುಡಿಬಂಡೆ ಪಟ್ಟಣದಲ್ಲಿ ಬಾಪೂಜಿನಗರದಶಾದಿ ಮಹಲ್ನಲ್ಲಿ ಕರ್ನಾಟಕ ಉರ್ದು ಅಕಾಡಮಿ ಮತ್ತು ಉರ್ದು ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಉರ್ದು ಉತ್ಸವ ಹಾಗೂ ಕವಿ ಗೋಷ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಉರ್ದು ಕೇವಲ ಮುಸ್ಲಿಂ ಭಾಷೆಯಲ್ಲ. ದೇಶದ ಐಕ್ಯತೆ ಬೆಸೆಯುವ ಸಾಧನವಾಗಿ ಕೆಲಸ ಮಾಡುತ್ತಿದೆ. ಉರ್ದು ಕೇವಲ ಒಂದು ಸಮುದಾಯಕ್ಕೆ ಸೇರಿದ ಭಾಷೆಯೆಂದು ತಿಳಿಯುವುದು ತಪ್ಪು. ಉರ್ದು ಶಾಲೆಗಳ ದಾಖಲಾತಿ ಹೆಚ್ಚಿಸಲು ಪೋಷಕರ ಸಹಕಾರ ಬೇಕಿದೆ. ಉರ್ದು ಶಿಕ್ಷಕರು ತಮ್ಮ ಮಕ್ಕಳಲ್ಲಿ ಒಬ್ಬರನ್ನಾದರೂ ಉರ್ದು ಶಾಲೆಗೆ ಸೇರಿಸಿದಾಗ ಮಾತ್ರ ಉರ್ದು ಭಾಷೆ ಉಳಿಯಲು ಸಾಧ್ಯ ಎಂದು ಹೇಳಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ ಮಾತನಾಡಿ, ಉರ್ದು ಶಾಲೆಗೆ ಬೇಕಾಗುವ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ,ಉರ್ದು ಶಾಲೆ ಮುಚ್ಚುವ ಹಂತಕ್ಕೆ ಬಂದಿದೆ ಇದನ್ನು ಉಳಿಸಲು ಉರ್ದು ಅಕಾಡಮಿ ಸಹಾಯ ಮಾಡಬೇಕು. ಉರ್ದು ಸಾಹಿತ್ಯ ಉಳಿಸಿ ಬೆಳೆಸಲು ಎಲ್ಲರ ಸಹಕಾರ ಮುಖ್ಯ. ಉರ್ದು ಸಾಹಿತ್ಯ ಪರಿಷತ್ ನ ಮಹ್ಮದ್ ನಾಸೀರ್ ರವರಂತೆ ಪ್ರತಿಯೊಂದ ತಾಲೂಕಿನಲ್ಲಿ ಉರ್ದು ಭಾಷೆಯನ್ನು ಉಳಿಸಿ ಬೆಳೆಸಲು ಯುವಜನತೆ ಮುಂದಾಗಬೇಕೆಂದರು.
ಕರ್ನಾಟಕ ಉರ್ದು ಅಕಾಡೆಮಿಯ ಸದಸ್ಯ ನತಿಕ್ ಅಲಿಪುರ್ ಮಾತನಾಡಿ ಕನ್ನಡ,ಇಂಗ್ಲೀಷ್ ಸೇರಿದಂತೆ ಇತರೆ ಮಾತೃ ಭಾಷೆಗಳಿಗೆ ನೀಡುವ ಪ್ರಾಮುಖ್ಯತೆಯನ್ನು ಉರ್ದು ಭಾಷೆಗೆ ನೀಡಬೇಕೆಂದು ತಿಳಿಸಿದರು. ಇದೇ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್. ಕೃಷ್ಣಪ್ಪ ರವರು ಸಹ ಮಾತನಾಡಿದರು.ಉರ್ದು ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿ ಕೊಟ್ಟರು. ರಾಜ್ಯದ ವಿವಿಧ ಭಾಗಗಳಿಂದ ಬಂದಿರುವ ಕವಿಗಳು ತಮ್ಮ ಸ್ವರಚಿತ ಉರ್ದು ಕವಿತೆಗಳನ್ನು ವಾಚನ ಮಾಡಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷ ವಿಕಾಸ್,ಮಾಜಿ ಅಧ್ಯಕ್ಷ ಹಾಗೂ ಕೆಡಿಪಿ ಸದಸ್ಯ ರಿಯಾಜ್ಪಾಷ, ನೌಕರರ ಸಂಘದ ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ, ಉರ್ದು ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮೊಹ್ಮದ್ ನಾಸೀರ್,ಅಲ್ಪ ಸಂಖ್ಯಾತರ ಅಧ್ಯಕ್ಷ ಅಬ್ದುಲ್ ವಹಾಬ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಮಂಜುನಾಥ,ಮುಫ್ತಿ ಆಸಿಫ್ ಉಲ್ಲಾ, ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಬಾಲಾಜಿ, ಮುಖಂಡರಾದ ಅಬ್ದುಲ್ ಸುಭಾನ್, ಚಾಂದ್ ಪಾಷ, ಶಫೀ ಉಲ್ಲಾ, ಖಲೀಲ್ ಪಾಷ ಸೇರಿದಂತೆ ಹಲವರು ಭಾಗವಹಿಸಿದ್ದರು.