ಓಂಪ್ರಕಾಶ್ ರಾವ್ ನಿರ್ದೇಶನದ ೫೦ನೇ ಚಿತ್ರ “ಗೆರಿಲ್ಲಾ WAR ” ಚಿತ್ರದ ನಾಯಕರಾಗಿ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಸೆಪ್ಟೆಂಬರ್ ೧೮ ಉಪೇಂದ್ರ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿ”ಗೆರಿಲ್ಲಾ WAR ” ಚಿತ್ರತಂಡ ಉಪೇAದ್ರ ಅವರಿಗೆ ಹುಟ್ಟುಹಬ್ಬದಶುಭಾಶಯ ತಿಳಿಸಿದೆ. ಪ್ರಸ್ತುತ ಓಂಪ್ರಕಾಶ್ ರಾವ್ನಿರ್ದೇಶನದ ಬಹು ನಿರೀಕ್ಷಿತ “ತ್ರಿಶೂಲಂ” ಚಿತ್ರದಲ್ಲೂ ಉಪೇಂದ್ರಅವರು ನಟಿಸಿದ್ದು, “ಗೆರಿಲ್ಲಾ WAR” ಇವರಿಬ್ಬರ ಕಾಂಬಿನೇಶನ್ನಲ್ಲಿ ಮೂಡಿಬರುತ್ತಿರುವ ಎರಡನೇಚಿತ್ರವಾಗಿದೆ.
ಬೇಬಿ ಇಂಚರ ಅರ್ಪಿಸುವ, ಎನ್ಎಸ್ ರಾವ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಓAಪ್ರಕಾಶ್ ರಾವ್ ಹಾಗೂ ಆರ್ ವಾಸುದೇವ ರೆಡ್ಡಿ ಅವರು ನಿರ್ಮಿಸುತ್ತಿರುವಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ಡೆನ್ನಿಸಾ ಪ್ರಕಾಶ್ ಅವರುಬರೆದಿರುವ ಕಥೆಗೆ ಓಂಪ್ರಕಾಶ್ ರಾವ್ ಅವರೆ ಚಿತ್ರಕಥೆ ಬರೆದು ನಿರ್ದೇಶನಮಾಡುತ್ತಿದ್ದಾರೆ. ಹಂಸಲೇಖ ಹಾಡು ಬರೆದು ಸಂಗೀತ ಸಂಯೋಜಿಸುತ್ತಿದ್ದಾರೆ. ರವಿಕುಮಾರ್ ಛಾಯಾಗ್ರಹಣ, ಲಕ್ಷ÷್ಮಣ್ ರೆಡ್ಡಿ ಸಂಕಲನ ಹಾಗೂ ರವಿವರ್ಮಅವರ ಸಾಹಸ ನಿರ್ದೇಶನವಿರುವ “ಗೆರಿಲ್ಲಾ ವಾರ್” ಚಿತ್ರಕ್ಕೆ ದೀಪು ಪಿ.ಆರ್ಸಂಭಾಷಣೆ ಬರೆಯುತ್ತಿದ್ದಾರೆ.
ಉಪೇಂದ್ರ ಅವರಿಗೆ ನಾಯಕಿಯಾಗಿ ನಿಮಿಕಾರತ್ನಾಕರ್ ನಟಿಸುತ್ತಿದ್ದಾರೆ. ರಂಗಾಯಣ ರಘು, ಸ್ವಸ್ತಿಕ್ ಶಂಕರ್, ಅಚ್ಯುತ್ ರಾವ್,ಭಾಸ್ಕರ್ ಶೆಟ್ಟಿ, ಆರಾಧ್ಯ, ಶ್ವೇತ ವೀರೇಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.”ಗೆರಿಲ್ಲಾ WAR ” ಒಂದು ರೀತಿಯ ಯುದ್ಧವಾಗಿದ್ದು, ಅಲ್ಲಿ ಒಂದು ಸಣ್ಣ ಗುಂಪುದೊಡ್ಡ ಸಂಖ್ಯೆಯ ಶತ್ರುಗಳೊಂದಿಗೆ ವ್ಯವಹರಿಸುವಾಗ ಅಸಾಂಪ್ರದಾಯಿಕ ತಂತ್ರಗಳನ್ನುಬಳಸುತ್ತದೆ.
ಹಿಂದೆ ಈ ರೀತಿಯ ಯುದ್ಧಗಳು ಆಗಿರುವ ಅನೇಕ ಉದಾಹರಣೆಗಳಿದೆ.ಹಾಗಂತ ನಮ್ಮದು ಐತಿಹಾಸಿಕ ಚಿತ್ರವಲ್ಲ. ಈ ವಿಷಯವನ್ನಿಟ್ಟುಕೊಂಡು ಪ್ರಸಕ್ತ ನಾವುಎದುರಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ.ಉಪೇಂದ್ರ ಅವರು ಈ ಚಿತ್ರದಲ್ಲಿ ಸೈನಿಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆಈ ಸೈನಿಕ ಗಡಿ ಮಾತ್ರ ಕಾಯುವ ಸೈನಿಕನಲ್ಲ. ಪ್ರಸ್ತುತ ನಾವು ಎದುರಿಸುತ್ತಿರುವಸಮಸ್ಯೆಗಳನ್ನು ಪರಿಹರಿಸುವ ಧೀಮಂತ ನಾಯಕ. ಇನ್ನೂ, ಈಗಿನ ನೂತನತಂತ್ರಜ್ಞಾನಗಳನ್ನು ಬಳಸಿಕೊಂಡು ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ಈ ಚಿತ್ರಮೂಡಿಬರಲಿದೆ ಎಂದು ನಿರ್ದೇಶಕ ಓಂಪ್ರಕಾಶ್ ರಾವ್ ತಿಳಿಸಿದ್ದಾರೆ.