ಬೆಂಗಳೂರು: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024 ಸೇರಿದಂತೆ ಒಟ್ಟು ಮೂರು ಮಸೂದೆಗಳನ್ನು ಸಹಿ ಹಾಕದೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರಕ್ಕೆ ವಾಪಸ್ ಕಳಸಿದ್ದಾರೆ. ಈ ತಿದ್ದುಪಡಿಯು ದಾರಿ ತಪ್ಪಿಸುವಂತಿದೆ. ಬದಲಾವಣೆ ತರುವ ಉದ್ದೇಶಕ್ಕಿಂತಲೂ ಅಧಿಕಾರ ಕಿತ್ತುಕೊಳ್ಳುವ ಯತ್ನವಾಗಿದೆ ಎಂದಿದ್ದಾರೆ.
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆಯನ್ನು ಬೆಳಗಾವಿಯಲ್ಲಿ ನಡೆದಿದ್ದ ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗಿತ್ತು.ಈ ಮಸೂದೆ ಪ್ರಕಾರ ವಿಶ್ವವಿದ್ಯಾಲಯಗಳಿಗೆ ರಾಜ್ಯಾಪಾಲರ ಬದಲು ಮುಖ್ಯಮಂತ್ರಿಗಳು ಕುಲಾಧಿಪತಿಗಳಾಗಲಿದ್ದಾರೆ. ವಿಶ್ವವಿದ್ಯಾಲಯದ ಎಲ್ಲ ನೇಮಕಾತಿ, ಆಡಳಿತಾತ್ಮಕ ಅಧಿಕಾರಿಗೆ ಮುಖ್ಯಮಂತ್ರಿಗಳಿಎ ಇರಲಿದೆ. ಈ ಮೂಲಕ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲಾಗಿದೆ.