ಬೆಂಗಳೂರು: ಬೆಂಗಳೂರಿನಲ್ಲಿ ಪುಂಡರು ಲಾಂಗ್ ಹಿಡಿದು ವ್ಹೀಲಿಂಗ್ ಮಾಡುತ್ತ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿರುವ ಸಂಬಂಧ ಪೊಲೀಸರು ಕ್ರಮ ಜರುಗಿಸುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.ಯಾವ ರೀತಿ ಕ್ರಮ ಜರುಗಿಸುತ್ತಾರೆ, ಯಾವ ರೀತಿ ಪ್ರಕರಣ ದಾಖಲಿಸುತ್ತಾರೆ ಎಂಬುದನ್ನು ಪೊಲೀಸರೇ ನಿರ್ಧರಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ.
ನನ್ನ ನೇತೃತ್ವದಲ್ಲೇ ಚುನಾವಣೆ ಎಂಬ ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹಸಚಿವರು, ಅದರಲ್ಲಿ ತಪ್ಪೇನಿದೆ? ಯಾರು ಹೇಳಿದ್ದಾರೆ ಅವರನ್ನ ಕೇಳಿ ಎಂದಿದ್ದಾರೆ.
ರಂಜಾನ್ ಇಫ್ತಿಯಾರ್ ಗೆ ಸಮಯ ವಿನಾಯ್ತಿ ನೀಡುವಂತೆ ಸರ್ಕಾರಕ್ಕೆ ಮುಸ್ಲಿಂ ಮುಖಂಡರ ಪತ್ರ ವಿಚಾರ ಸಂಬಂಧಪಟ್ಟಂತೆ ಮಾತನಾಡಿ ಅದರ ಬಗ್ಗೆ ನನಗೆ ಗೊತ್ತಿಲ್ಲ. ಸರ್ಕಾರ ಅದನ್ನ ತೀರ್ಮಾನ ಮಾಡಲಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ಮೈಸೂರಿನ ಉದಯಗಿರಿ ಗಲಭೆ ಪ್ರಕರಣಗಳದಲ್ಲಿ ಮೌಲ್ವಿ ಬಂಧನ ವಿಚಾರಕ್ಕೆ ಸಂಬಂಧಪಟ್ಟಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಘಟನೆ ನಡೆದ ಸ್ಥಳದಲ್ಲಿ ಸಿಸಿ ಟಿ.ವಿ.ಯಲ್ಲಿ ಯಾರೆಲ್ಲಾ ಇದ್ರು, ಅವರೆಲ್ಲರನ್ನ ಅರೆಸ್ಟ್ ಮಾಡಿದ್ದಾರೆ. ಕೆಲವರನ್ನ ಒಂದು ದಿನದಲ್ಲೇ ಬಂಧನ ಮಾಡಿದ್ದರು, ನಿನ್ನೆ ಮೌಲ್ವಿಯನ್ನ ಬಂಧಿಸಿದ್ದಾರೆ. ಬಿಜೆಪಿಯವರು ಪ್ರತಿಭಟನೆ ಮಾಡಲಿ, ಅವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಿದ್ದಾರೆ, ಅವರು ಮಾಡಲಿ ಎಂದಷ್ಟೇ ಹೇಳಿದ್ದಾರೆ.