ಬೆಂ.ಗ್ರಾ.ಜಿಲ್ಲೆ: ಬೇಸಿಗೆ ಆರಂಭವಾಗುತಿದ್ದು, ಜಿಲ್ಲಾಡಳಿತ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ನೀಡಬೇಕು ಮತ್ತು ಜಾನುವಾರುಗಳಿಗೆ ಬೇಸಿಗೆಯಲ್ಲಿ ಬಾಧಿಸುವ ರೋಗಗಳನ್ನು ಸರಿಯಾಗಿ ಉಪಚರಿಸಬೇಕೆಂದು ಆಹಾರ ನಾಗರಿಕ ಸರಬರಾಜು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರು ಒದಗಿಸುವುದು ಮೊದಲ ಆದ್ಯತೆಯಾಗಿದ್ದು, ಈ ಸಂಬಂಧ ಅಧಿಕಾರಿಗಳು ಸಭೆ ನಡೆಸಬೇಕು.
ಹಣದ ಕೊರತೆಯಿಲ್ಲ, ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಸಾಕಷ್ಟು ಹಣವಿದ್ದು, ಬಳಸಿಕೊಳ್ಳಿ ಎಂದರು ಪೋಡಿ ಅಭಿಯಾನದಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲೂ ಪ್ರಥಮ
ಸ್ಥಾನ ಕಾಯ್ದುಕೊಳ್ಳುವುದರೊಂದಿಗೆ ರಾಜ್ಯದ ಮೊದಲ ಪೋಡಿಮುಕ್ತ ಜಿಲ್ಲೆಯಾಗುವಂತೆ ನೋಡಿಕೊಳ್ಳಬೇಕೆಂದರು. ಗ್ರಾಮೀಣ ರಸ್ತೆಗಳು, ರೈತರ ಜಮೀನುಗಳಿಗೆ ರಸ್ತೆ, ಸ್ಮಶಾನದ ರಸ್ತೆಗಳ ಒದಗಿಸುವ ಸಂಬಂಧ ವಾರದಲ್ಲಿ ಒಂದು ದಿನ ಅಥವ ಒಂದು ಮಧ್ಯಾಹ್ನ ಈ ಬಗೆಗೆ ಅಧಿಕಾರಿಗಳ ಸಭೆಯಾಗಬೇಕೆಂದರು.
ಜಿಲ್ಲೆಯ ಹಲವು ಕೆರೆಗಳಲ್ಲಿ ಮಳೆಯಿಲ್ಲದ ಕಾರಣ ಮರ ಗಿಡಗಳು ಬೆಳೆದಿದ್ದು ಅವುಗಳತೆರವುಗೊಳಿಸಬೇಕು, ಹೂಳು ತುಂಬಿರುವಕೆರೆಗಳ ಹೂಳು ತೆಗೆಯುವ ಕಾರ್ಯವಾಗಬೇಕೆಂ
ದರು. ಜೊತೆಗೆ ಬತ್ತಿಹೋಗಿರುವ ಕೆರೆಗಳನ್ನು ಪುನಶ್ಚೇತನ ಮಾಡುವುದರೊಂದಿಗೆ, ಕೆರೆಯ ಸುತ್ತಲೂ ಮರಗಳನ್ನು ನೆಡುವಂತೆ ಆಯಾ ತಾಲ್ಲೂಕಿನ ತಹಶೀಲ್ದಾರುಗಳಿಗೆ ತಿಳಿಸಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 2ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯನಿವೇಶನ ರಹಿತರಿಗೆ ಮಾರ್ಚ್ ಅಂತ್ಯದೊಳಗಾಗಿ ಗರಿಷ್ಟ ಪ್ರಮಾಣದ ನಿವೇಶನಗಳನ್ನು ಹಂಚಿಕೆ ಮಾಡಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕೆಂದು ಅಧಿಕಾ ರಿಗಳಿಗೆ ತಾಕೀತು ಮಾಡಿದರು.
ಜಿಲ್ಲೆಯಲ್ಲಿ 20 ಸಾವಿರದಷ್ಟು ವಸತಿ ರಹಿತರು ನಿವೇಶನಗಳಿಗೆ ಅರ್ಜಿ ಸಲ್ಲಿಸಿದ್ದು, ಆದ್ಯತೆಯ ಮೇರೆಗೆ ನಿವೇಶನ ಹಂಚಲು ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ.ಬಸವ ರಾಜು, ಸಿಇಓ ಕೆ.ಅನುರಾಧ, ಎಡಿಸಿ ಹೆಚ್.ಅಮರೇಶ್, ಎಸಿ ದುರ್ಗಶ್ರೀ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.