2024ರಲ್ಲಿ ಸದ್ದು ಸುದ್ದಿ ಮಾಡಿದ ಸಿನಿಮಾಗಳ ಸಾಲಲ್ಲಿ ಮೊದಲ ಪಂಕ್ತಿಯಲ್ಲಿ ನಿಲ್ಲೋ ಸಿನಿಮಾಗಳಲ್ಲಿ ಆರಾಮ್ ಅರವಿಂದ ಸ್ವಾಮಿ ಕೂಡ ಒಂದು.ಕಮರ್ಷಿಯಲ್ ಸಕ್ಸಸ್ ಕೊಟ್ಟ ಬೆನ್ನಿಗೆ ನಟ ನಿರ್ದೇಶಕ ಅನೀಶ್ ತೇಜೇಶ್ವರ್ ಈ ವರ್ಷ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿದ್ದಾರೆ… ಮತ್ತೊಮ್ಮೆ ನಿರ್ದೇಶನದ ಜೊತೆಗೆ ಹೀರೋ ಆಗಿ ನಟಿಸ್ತಿದ್ದಾರೆ… ಈ ಟ್ರೆಂಡಿಗೆ ತಕ್ಕಂತ ಮಾಸ್ ಕಮರ್ಷಿಯಲ್ ಪ್ರಯೋಗವನ್ನ ಮಾಡೋದಕ್ಕೆ ಮುಂದಾಗಿದ್ದಾರೆ.
ರಾಮಾರ್ಜುನ ಚಿತ್ರದ ನಂತ್ರ ಮತ್ತೆ ಆ್ಯಕ್ಷನ್ ಕಟ್ ಹೇಳ್ತೀರೋ ಅನೀಶ್ಗೆ ಭಾವಪ್ರೀತ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಸಾಥ್ ಕೊಡ್ತಿದೆ. ಭಾವಪ್ರೀತ ಪ್ರೊ ಡಕ್ಷನ್ಸ್ ನ ವಿಜಯ್ ಎಂ ರೆಡ್ಡಿ ಅನೀಶ್ ವಿಷನ್ಗೆ ಬಂಡವಾಳ ಹೂಡ್ತಿದ್ದಾರೆ. ಅನೀಶ್ ಚಿತ್ರದೊಂದಿಗೆ ಉದ್ಯಮಕ್ಕೆ ಕಾಲಿಡ್ತಿರೋ ವಿಜಯ್ ಎಂ ರೆಡ್ಡಿ ಉದ್ಯಮದಲ್ಲಿ ದೊಡ್ಡದಾಗಿ ನೆಲೆ ನಿಲ್ಲೋದಕ್ಕೆ ಸಜ್ಜಾಗಿದ್ದಾರೆ. ಈ ಕುರಿತು ಅನೀಶ್ ತಮ್ಮ ಸೋಷಿಯಲ್ ಮಿಡಿಯಾ ಪೇಜ್ ಮೂಲಕ ಪೋಸ್ಟ್ ಹಂಚಿಕೊಂಡಿದ್ದಾರೆ.
ಎಲ್ಲರಿಗೂ ನಮಸ್ಕಾರ…,
ಆರಾಮ್ ಅರವಿಂದಸ್ವಾಮಿ ಅಭೂತಪೂರ್ವ ಯಶಸ್ಸಿನ ನಂತರ, ನನ್ನ ಮುಂದಿನ ಹೆಜ್ಜೆಯನ್ನು ಘೋಷಿಸಲು ನನಗೆ ತುಂಬಾ ಸಂತೋಷವಾಗಿದೆ. ಇದನ್ನು ಭಾವಪ್ರೀತ ಪೆÇ್ರಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಮೂಲಕ ವಿಜಯ್ ಎಂ. ರೆಡ್ಡಿ ನಿರ್ಮಿಸಲಿದ್ದಾರೆ. ರಾಮಾರ್ಜುನದ ನಂತರ ನಾನು ಮತ್ತೆ ನಿರ್ದೇಶಿಸುತ್ತಿದ್ದು ಮತ್ತು ಈ ಬಾರಿ ಇನ್ನೂ ದೊಡ್ಡದಾಗಿ ಮತ್ತು ಉತ್ತಮವಾಗಿರಲಿದೆ! ನಿಮ್ಮ ನಿರೀಕ್ಷೆಗಳನ್ನು ತಲುಪಲು ನಮ್ಮ ತಂಡವು ಶ್ರಮಿಸುತ್ತಿದೆ.ನೀವು ನನ್ನನ್ನು ಮತ್ತೊಂದು ಭರವಸೆಯ ಮತ್ತು ವಿಶಿಷ್ಟ ಪಾತ್ರದಲ್ಲಿ ನೋಡುತ್ತೀರಿ ಎಂದು ಭಾವಿಸುತ್ತಾ. ಹೆಚ್ಚಿನ ಪ್ರೇಕ್ಷಕರನ್ನು ತಲುಪಲು ನಾವು ಏಕಕಾಲದಲ್ಲಿ ಕನ್ನಡ ಮತ್ತು ತೆಲುಗಿನಲ್ಲಿ ಚಿತ್ರೀಕರಣ ಮಾಡುತ್ತಿದ್ದೇವೆ.
ಶೀರ್ಷಿಕೆ, ತಾರಾಗಣ ಮತ್ತು ಇನ್ನಿತರೆ ವಿವರಗಳಿಗಾಗಿ ನಿರೀಕ್ಷಿಸಿ! ಚಿತ್ರೀಕರಣ ಪ್ರಾರಂಭವಾಗಿದೆ, ಮತ್ತು ಶೀಘ್ರದಲ್ಲೇ ಹೆಚ್ಚಿನ ವಿವರಗಳು ಬರಲಿವೆ. ನಿಮ್ಮ ನಿರಂತರ ಬೆಂಬಲ ಮತ್ತು ಪ್ರೀತಿಗಾಗಿ ಧನ್ಯವಾದಗಳು ಎನ್ನುತ್ತಾರೆ ಅನೀಶ್.