ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, ಎಲ್ಲಾ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವಿನತ್ತ ಸಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಂಸದ ಡಿಕೆ ಸುರೇಶ್ ಅವರು, ಈ ಚುನಾವಣೆ ಮೂಲಕ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ ಮತದಾರಾರು ಪ್ರತಿಪಕ್ಷಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.
ಇದೇ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಕರಿಯಾ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ನಾನು ಈ ಮೊದಲೇ ಹೇಳಿದ್ದೆ. ಜಮೀರ್ ಅಹ್ನದ್ ಖಾನ್ ಹೇಳಿಕೆ ಯಾವುದೇ ಪರಿಣಾಣ ಬೀರುವುದಿಲ್ಲ ಅಂತ. ಜಮೀರ್ ಇಂತಹ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಜನಾಂಗೀಯ ನಿಂದನೆ ಎಂದೆಲ್ಲಾ ಬಿಂಬಿಸಿದ್ದು ಮಾಧ್ಯಮಗಳು. ನೀವು ಒಂದು ಅಭ್ಯರ್ಥಿಯ ಪರವಾಗಿ ಇದನ್ನು ದೊಡ್ಡ ವಿಚಾರವಾಗಿ ಬಿಂಬಿಸಿದಿರಿ ಎಂದು ಮಾಧ್ಯಮಗಳ ವಿರುದ್ಧವೇ ವಾಗ್ದಾಳಿ ನಡೆಸಿದರು.