ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯು ಸಾರಿಗೆ ಮತ್ತು ಮುಜರಾಯಿ ಸಚಿವ ಹಾಗೂ ಪ್ರಾಧಿಕಾರದ ಅಧ್ಯಕ್ಷ ರಾಮಲಿಂಗರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಘಾಟಿಯಲ್ಲಿ ಜ.5 ರಂದು ನಡೆಯಲಿರುವ ರಥೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಸುರಕ್ಷತಾ ಕ್ರಮಗಳು ಹಾಗೂ ಮೂಲಭೂತ ಸೌಲಭ್ಯ ಕಲ್ಪಿಸಲು ಹೆಚ್ಚಿನ ಒತ್ತು ನೀಡಲು ಸೂಚಿಸಿದರು. ಧಾಮಿಕ ದತ್ತಿ ಆಯುಕ್ತ ವೆಂಕಟೇಶ್, ಜಿಲ್ಲಾಧಿಕಾರಿ ಎನ್ಶಿವಶಂಕರ್, ಉಪಕಾರ್ಯದರ್ಶಿ ಸತ್ಯವತಿ, ಪ್ರಾಧಿಕಾರದ ಕಾರ್ಯದರ್ಶಿ ಎಂ.ನಾರಾಯಣಸ್ವಾಮಿ, ಪ್ರಧಾನ ಅರ್ಚಕ ಆರ್. ಸುಬ್ರಹ್ಮಣ್ಯ ಇದ್ದರು.