ಬೆಂಗಳೂರು ನಗರ ಜಿಲ್ಲೆ: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. ೭.೬೯ ಕೋಟಿ ಅಂದಾಜು ಮೌಲ್ಯದ ಒಟ್ಟು ೫ ಎಕರೆ ೦.೦೭.೨೦ ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು.
ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗುಂಡುತೋಪು, ಸ್ಮಶಾನ, ಸರ್ಕಾರಿ ಓಣಿ, ಬಿಳಿಕೆರೆ ಜಾಜಿಮುಳಗಡೆ, ಖರಾಬು, ಗೋಮಾಳ ಮತ್ತು ಕೆರೆ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.
ಬೆAಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿಯ ದೇವಗೆರೆ ಗ್ರಾಮದ ಸ.ನಂ ೭೧ ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೦.೨೨ ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.೦.೫೦ ಲಕ್ಷಗಳಾಗಿರುತ್ತದೆ. ತಾವರೆಕೆರೆ ಹೋಬಳಿಯ ದೊಡ್ಡೇರಿ ಗ್ರಾಮದ ಸ.ನಂ ೬೨ ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೦.೦೫ ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ.೦.೧೯ ಲಕ್ಷಗಳಾಗಿರುತ್ತದೆ.
ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಶಿವನಪುರ ಗ್ರಾಮದ ಸ.ನಂ ೨/೪ಎ ರ ಸರ್ಕಾರಿ ಓಣಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೦.೦೨.೦೮ ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. ೦.೨೦ ಲಕ್ಷಗಳಾಗಿರುತ್ತದೆ. ದಾಸನಪುರ ಹೋಬಳಿಯ ಶಿವನಪುರ ಗ್ರಾಮದ ಸ.ನಂ ೨/೪ಬಿ೧ ರ ಸರ್ಕಾರಿ ಓಣಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೦.೦೧೨ ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. ೦.೧೦ ಲಕ್ಷಗಳಾಗಿರುತ್ತದೆ. ದಾಸನಪುರ ಹೋಬಳಿಯ ಹೊಸಹಳ್ಳಿಪಾಳ್ಯ ಗ್ರಾಮದ ಸ.ನಂ ೪೦ ರ ಬಿಳಿಕೆರೆ ಜಾಜಿಮುಳಗಡೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೨ ಎಕರೆಯಾಗಿದ್ದು, ಅಂದಾಜು ಮೌಲ್ಯ ರೂ. ೨ ಕೋಟಿಗಳಾಗಿರುತ್ತದೆ. ದಾಸನಪುರ ಹೋಬಳಿಯ ತೊರೆನಾಗಸಂದ್ರ ಗ್ರಾಮದ ಸ.ನಂ ೩೪ ರ ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೦.೨೭ ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. ೧.೫೦ ಕೋಟಿಗಳಾಗಿರುತ್ತದೆ.
ಯಲಹಂಕ ತಾಲ್ಲೂಕಿನ ಹೆಸರಘಟ್ಟ-೧ ಹೋಬಳಿಯ ಕೊಡಿಗೆತಿರುಮಳಾಪುರ ಗ್ರಾಮದ ಸ.ನಂ ೧೪ ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೦.೩೧ ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ. ೧.೨೦ ಕೋಟಿಗಳಾಗಿರುತ್ತದೆ. ಹೆಸರಘಟ್ಟ-೨ ಹೋಬಳಿಯ ಕಾಕೋಳು ಗ್ರಾಮದ ಸ.ನಂ ೪೪ರ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ ೧ ಎಕರೆಯಾಗಿದ್ದು, ಅಂದಾಜು ಮೌಲ್ಯ ರೂ. ೨ ಕೋಟಿಗಳಾಗಿರುತ್ತದೆ.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಯಾದ ಡಾ.ಜಗದೀಶ್ ಕೆ.ನಾಯಕ್ , ಜಿಲ್ಲಾಧಿಕಾರಿಗಳ ಕಛೇರಿಯ ಕಚೇರಿಯ ಸಹಾಯಕರು, ವಿವಿಧ ತಾಲ್ಲೂಕಿನ ತಹಶೀಲ್ದಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.