ಭುವನೇಶ್ವರ: ಒಡಿಶಾ ರಾಜ್ಯದ ಎಸ್ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ 10 ಜನ ದುರ್ಮರಣಕ್ಕೀಡಾಗಿ ರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ.
ಈ ಘಟನೆ ಕಟಕ್ ನಗರದಲ್ಲಿರುವ ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯು ವಿಭಾಗದಲ್ಲಿ ಸಂಭವಿಸಿದೆ. ಸೋಮವಾರ ಮುಂಜಾನೆ ಸುಮಾರು 2.59 ಗಂಟೆ ವೇಳೆಗೆ ಐಸಿಯುವಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ನಡೆದ ವೇಳೆಗೆ ಐಸಿಯುವಿನಲ್ಲಿ ಸುಮಾರು 15 ಮಂದಿ ರೋಗಿಗಳು ದಾಖಲಾಗಿದ್ದರು.
ಅಗ್ನಿ ಅವಘಡ ಒಡಿಶಾ ಆಸ್ಪತ್ರೆಯಲ್ಲಿ 10 ರೋಗಿಗಳು ಸಜೀವ ದಹನ



