ಬೆಂಗಳೂರು: ರಾಜ್ಯಾದ್ಯಂತಇರುವಎಲ್ಲಾ ಕಚೇರಿಗಳು, ಅಂಗಡಿ ಮುಂಗಟ್ಟುಗಳು, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.೬೦ ರಷ್ಟುಕನ್ನಡವನ್ನುಕಡ್ಡಾಯವಾಗಿ ಬಳಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ನವೆಂಬರ್ ೧ ರಇಂದುರಾಜ್ಯಾದ್ಯAತ ೭೦ನೇ ಕನ್ನಡರಾಜ್ಯೋತ್ಸವವನ್ನು ಸಂಭ್ರಮದಿAದಆಚರಿಸಲಾಗುತ್ತಿದ್ದು, ಕಂಠೀರವಕ್ರೀಡಾAಗಣದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕನ್ನಡ ಮಣ್ಣಿನಲ್ಲೇ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಬಂದುಇಲ್ಲಿ ಬದುಕುಕಟ್ಟಿಕೊಂಡವರುಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕುಎಂಬುದು ನಮ್ಮಆಶಯ. ಬೇರೆ ಭಾಷೆಗಳನ್ನು ಗೌರವಿಸೋಣ. ನೆಲದ ಭಾಷೆಕನ್ನಡವನ್ನು ಪ್ರೀತಿಸೋಣಎಂದು ತಿಳಿಸಿದ್ದಾರೆ.ಕನ್ನಡರಾಜ್ಯೋತ್ಸವಎನ್ನುವುದು ಕೇವಲ ಉತ್ಸವಅಲ್ಲ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿರುವಕನ್ನಡಿಗರುಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ. ಇಂತಹದ್ದೊAದುಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಈ ದಿನ ಹೆಮ್ಮೆಯಿಂದ ಸ್ಮರಿಸೋಣಎಂದು ಹೇಳಿದ್ದಾರೆ.
ಹೊರ ರಾಜ್ಯಗಳಿಂದ, ಹೊರ ದೇಶಗಳಿಂದ ಶಿಕ್ಷಣ, ಉದ್ಯೋಗಇನ್ನಿತರೆ ಕಾರಣಗಳಿಗಾಗಿ ಇಲ್ಲಿ ನೆಲೆಸಿರುವ, ಬದುಕುಕಟ್ಟಿಕೊಂಡಿರುವಎಲ್ಲರೂಕನ್ನಡಿಗರೇ, ನಮ್ಮವರೇ. ನಾವು – ನೀವು ಎಲ್ಲರೂ ಸೇರಿಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ ಎಂದು ಹೇಳಿದ್ದಾರೆ.



