ಬೆಂಗಳೂರು :ಎಟಿಎಂ ಕೇಂದ್ರಗಳಿಗೆ ಹಣ ತುಂಬ ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಆರ್ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ ೭.೧೧ಕೋಟಿ ದರೋಡೆ ಪ್ರಕರಣದ ೨೦ ಕ್ಕೂ ಹೆಚ್ಚು ಮಂದಿಯನ್ನು ನಗರ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆಕೈಗೊಂಡಿದ್ದಾರೆ. ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಹೆಚ್ಡಿಎಫ್ ಸಿ ಬ್ಯಾಂಕ್ ಸಿಬ್ಬಂದಿ, ಸಿಎಂಎಸ್ ಸಿಬ್ಬಂದಿಯನ್ನು ತೀವ್ರ ವಿಚಾರಣೆ ಮಾಡಲಾಗಿದ್ದು, ಘಟನೆಯ ಸಮಯವನ್ನು ಆಧರಿಸಿ ಪ್ರಶ್ನೆ ಕೇಳಲಾಗುತ್ತಿದೆ.
ಇನ್ನು ಪ್ರಕರಣದ ಪತ್ತೆಗೆ ರಚಿಸಲಾಗಿರುವ ವಿಶೇಷ ತಂಡಗಳು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದು, ರಾಜ್ಯದ ಗಡಿಭಾಗಗಳಾದ ಆಂಧ್ರಪ್ರದೇಶ, ತಮಿಳುನಾಡಲ್ಲಿ ಆರೋಪಿಗಳಿಗಾಗಿ ತಲಾಶ್ ಮುಂದುವರಿದಿದೆ. ೧೦೦,ಕ್ಕೂ ಹೆಚ್ಚು ಪೊಲೀಸರುದರೋಡೆಕೋರ ಪತ್ತೆಗೆ ಹಗಲಿರುಳು ಶ್ರಮಿಸುತ್ತಿದ್ದಾರೆ.ಪರಪ್ಪನಅಗ್ರಹಾರಜೈಲಿಗೂ ವಿಶೇಷ ತಂಡವೊಂದು ಭೇಟಿಜೈಲಿನಿಂದಕೃತ್ಯಕ್ಕೆ ಸಂಚು ರೂಪಿಸಿರುವ ಅನುಮಾನದ ಮಾಹಿತಿಕಲೆಹಾಕಲಾಗಿದೆ.
ರಾಬರಿಗ್ಯಾಂಗ್ ಹಾಗೂ ಜೈಲಿನ ಒಳಗಿರುವ ಯಾರಿಗಾದರೂ ಲಿಂಕ್ ಇದೆಯಾ ಎಂಬ ಆಯಾಮದಲ್ಲಿ ವಿಚಾರಣೆ ನಡೆಸಲಾಗಿದೆ, ಪ್ರಕರಣವನ್ನುತಾಂತ್ರಿಕ ಅಂಶಗಳು,ಸ್ಥಳದಲ್ಲಿ ದೊರೆತ ಅಂಶಗಳು, ಸಿಎಂಎಸ್ ಏಜೆನ್ಸಿ ವಾಹನದ ಸಿಬ್ಬಂದಿ ನೀಡಿರುವ ಮಾಹಿತಿಯನಯ ಆಧರಿಸಿ ಶೋಧ ಕೈಗೊಳ್ಳಲಾಗಿದೆ.
ವೆಬ್ ಸೀರೀಸ್ ಪ್ರೇರಿತ: ಕೃತ್ಯವು ವೆಬ್ ಸೀರೀಸ್ ಪ್ರೇರಿತವಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಆರೋಪಿಗಳು ದರೋಡೆಗೆ ಹಲವು ದಿನಗಳಿಂದ ಸಂಚು ರೂಪಿಸಲಾಗಿತ್ತು,
ಮೂರು ಠಾಣೆಗೆ ಸೇರುವ ಸ್ಥಳದಲ್ಲಿ ವಾಹನ ಬಿಡುವುದು ಕೂಡ ಯೋಜನೆ ಆಗಿತ್ತು ಎಂಬ ಅನುಮಾನ ವ್ಯಕ್ತವಾಗಿದೆ. ಸಿಎಂಎಸ್ ವಾಹನ ಸಿಕ್ಕಿದ್ದ ಫ್ಲೈ ಓವರ್ ಮೂರು ಪೊಲೀಸ್ ಠಾಣೆಗಳಿಗೆ ಗಡಿಯಾಗಿದೆ.ನಿಮಾನ್ಸ್ ನಿಂದ ಮೇಲ್ಭಾಗಕ್ಕೆ ಬಂದರೆಆಡುಗೋಡಿಠಾಣೆ ಸರಹದ್ದು, ವಾಹನದಎಡಬದಿಯಲ್ಲಿ ಸುದ್ದುಗುಂಟೆಪಾಳ್ಯ ಠಾಣಾ ವ್ಯಾಪ್ತಿ ಮತ್ತುಕೃತ್ಯ ನಡೆದಿರುವುದು ಸಿದ್ದಾಪುರ ಠಾಣಾ ವ್ಯಾಪ್ತಿಯಲ್ಲಿ.ಆ ಪೈಕಿ ಸಿದ್ದಾಪುರ ಠಾಣೆದಕ್ಷಿಣ ವಿಭಾಗಕ್ಕೆ ಸೇರಿದರೆ ವಾಹನ ಸಿಕ್ಕಿದ್ದು ಸುದ್ದುಗುಂಟೆಪಾಳ್ಯ ಪೊಲೀಸ್ಠಾಣಾ ವ್ಯಾಪ್ತಿಯಲ್ಲಿ.ಈ ಠಾಣೆ ಸೌತ್ – ಈಸ್ಟ್ – ವಿಭಾಗಕ್ಕೆ ಸೇರಿದ್ದು. ಹೀಗಾಗಿ ವಾಹನ ಸಿಕ್ಕ ಬಳಿಕ ಮೊದಲುಯಾವಠಾಣಾ ವ್ಯಾಪ್ತಿಗೆಘಟನೆ ಬರಲಿದೆ ಎಂಬ ಗೊಂದಲ ಉಂಟಾಗಿದೆ.
ಠಾಣಾ ವ್ಯಾಪ್ತಿಗೊಂದಲ: ಪೊಲೀಸರು ಸಾಮಾನ್ಯವಾಗಿ ತಮ್ಮ ಠಾಣೆ ಸಹರದ್ದಿನ ಆಧಾರದ ಮೇಲೆ ಕೆಲಸ ಮಾಡಲಿರುವ ಕಾರಣ,ದರೋಡೆಕೋರರ ಯೋಜನೆಯು ಸೇರಿತ್ತಾ ಎನ್ನುವ ಅಂಶವೂ ಇತ್ತಾ ಎಂಬ ಪ್ರಶ್ನೆ ಉದ್ಭವಿಸಿದೆ. ಹೀಗಾಗಿ, ಅನೇಕ ದ ಗಳಲ್ಲಿ ಇರುವಂತೆ ಪೊಲೀಸರನ್ನೇ ಗೊಂದಲಕ್ಕೆ ದೂಡಿ ಗ್ರೇಟ್ ಎಸ್ಕೇಪ್ ಆಗುವ ಸಂಚು ಆರೋಪಿಗಳದ್ದಾಗಿತ್ತಾ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.



