ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಆರೋಪಿ ಶಾರೀಕ್ ಸೇರಿದಂತೆ ನಾಲ್ವರ ವಿರುದ್ಧ ಒಂದು ಸಾವಿರ ಪುಟಗಳ ಆರೋಪಪಟ್ಟಿ(ಚಾರ್ಜ್ಶೀಟ್) ಸಲ್ಲಿಸಲು ಮುಂದಾಗಿದ್ದಾರೆ.
ಪ್ರಮುಖ ಆರೋಪಿ ಶಾರಿಕ್, ಮಾಜ್ ಮುನೀರ್, ಯಾಸೀನ್, ಅರಾಫತ್ ಹೇಳಿಕೆಗಳನ್ನು ಎನ್ಐಎ ಅಧಿಕಾರಿಗಳು ಚಾರ್ಜ್ಶೀಟ್ನಲ್ಲಿ ದಾಖಲಿಸಿಕೊಂಡಿದ್ದಾರೆ.ಸ್ಫೋಟಕ್ಕೆ ಎಲ್ಲೆಲ್ಲಿ ಪ್ಲ್ಯಾನ್ ಮಾಡಲಾಗಿತ್ತು, ತರಬೇತಿ ಎಲ್ಲಿ ನಡೆಸಲಾಗಿತ್ತು ಯಾರೆಲ್ಲಾ ಕೃತ್ಯದಲ್ಲಿ ಇದ್ದರು ಎಂಬುದರ ಬಗ್ಗೆ ಉಲ್ಲೇಖಿಸಲಾಗಿದೆ. ಸ್ಥಳ ಮಹಜರು ವೇಳೆ ತರಬೇತಿ ಪಡೆದಿದ್ದ ತುಂಗಾ ನದಿ ತೀರದ ಸ್ಥಳವನ್ನು ಶಾರೀಕ್ ಈಗಾಗಲೇ ತೋರಿಸಿದ್ದಾನೆ.
ಕದ್ರಿ ದೇವಸ್ಥಾನ ಸ್ಫೋಟಕ್ಕೆ ಎಲ್ಲೇಲ್ಲಿ ಯೋಜನೆ ಹಾಕಿಕೊಳ್ಳಲಾಗಿತ್ತು, ತರಬೇತಿ ಎಲ್ಲಿ ನಡೆಸಲಾಗಿತ್ತು, ಯಾರೆಲ್ಲರೂ ತಂಡದಲ್ಲಿದ್ದರು, ಕದ್ರಿ ದೇವಸ್ಥಾನ ಸ್ಫೋಟದ ಬಳಿಕ ಉಡುಪಿ ಕೃಷ್ಣಾಮಠ, ಚಿಕ್ಕಮಗಳೂರು ಬಿಜೆಪಿ ಕಚೇರಿ ಸ್ಫೋಟ ಹೊಣೆಯೂ ಇದೇ ಶಾರಿಕ್ ವಹಿಸಿದ್ದ. ಇದರ ಜೊತೆಗೆ ಕೆಲ ಮಠಗಳನ್ನು ಗುರಿಯಾಗಿಸಿಕೊಂಡಿದ್ದು, ಅವುಗಳ ಸ್ಫೋಟಕ್ಕೂ ಸಂಚು ರೂಪಿಸಿದ್ದ ಬಗ್ಗೆಯೂ ಉಲ್ಲೇಖಿಸಲಾಗಿದೆ.
ಜೊತೆಗೆ, ಆರು ತಿಂಗಳ ಕಾಲ ನಿರಂತರವಾಗಿ ತರಬೇತಿ ಪಡೆದ ಬಗ್ಗೆಯೂ ಮಾಹಿತಿ ಇದರಲ್ಲಿದೆ.
ಅಲ್ಲದೆ, ವಿದೇಶಿ ಹ್ಯಾಂಡ್ಲರ್ಗಳ ಬಗ್ಗೆಯೂ ಸ್ಫೋಟಕ ವಿಚಾರಗಳನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ. ಸ್ಪೋಟಕಗಳನ್ನು ಖರೀದಿಗೆ ವಿದೇಶದಿಂದ ಹಣ ಸಾಕಷ್ಟು ಹಣ ಬರುತ್ತಿತ್ತು. ಇದೇ ಹಣದಿಂದ ಆರೋಪಿಗಳು ಸ್ಫೋಟಕಕ್ಕೆ ಬೇಕಾದ ವಸ್ತುಗಳನ್ನು ಖರೀದಿ ಮಾಡುತ್ತಿದ್ದರು. ಜೊತೆಗೆ ಇವರ ಖರ್ಚು ವೆಚ್ಚಗಳನ್ನು ಹ್ಯಾಂಡ್ಲರ್ಗಳೇ ನೋಡಿಕೊಳ್ಳುತ್ತಿದ್ದರು ಎಂಬುದು ಉಲ್ಲೇಖವಾಗಿದೆ.