ಕನಕಪುರ: ನಗರದ ಹೆಸರಾಂತ ಅಡ್ವೆಂಚರ್ ಅಥ್ಲೆಟಿಕ್ಸ್ ಅಕಾಡೆಮಿವತಿಯಿಂದ ನಾಲ್ಕನೇ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ ಫೆ.17/18 ರ ಶನಿವಾರ ಮತ್ತು ಭಾನುವಾರದಂದು ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಕೆ.ವಿ.ಆನಂದ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ಹಾಗೂ ರಾಮನಗರ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಸಹಯೋಗದಲ್ಲಿ ಅಡ್ವೆಂಚರ್ ಅಥ್ಲೆಟಿಕ್ ಅಕಾಡೆಮಿಯ ಸಂಸ್ಥಾಪಕ ದಿವಂಗತ ಮನೋಜ್ ಕುಮಾರ್ ಸ್ಮರಣಾರ್ಥ ನಾಲ್ಕನೇ (4) ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾ ಕೂಟ ಆಯೋಜಿಸಲಾಗಿದ್ದು.
ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಕಾರ್ಯದರ್ಶಿಯಾದ ರಾಜುವೇಲ್, ಜಂಟಿ ಕಾರ್ಯದರ್ಶಿ ಪ್ರತಾಪ್ ರೆಡ್ಡಿ ಹಾಗೂ ರಾಮನಗರ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ನ ಕಾರ್ಯದರ್ಶಿ ಉಮೇಶ್ ಬಾಬು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಶಾಲಾ ಮಕ್ಕಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ನಗರದಪ್ರಸಿದ್ಧ ಶ್ರೀ ದೇಗುಲಮಠದ ಕಿರಿಯ ಸ್ವಾಮೀಜಿಗಳಾದ ಶ್ರೀ ಶ್ರೀ ಚನ್ನಬಸವ ಸ್ವಾಮೀಜಿ ನೇರವೇರಿಸಲಿದ್ದಾರೆ, ತಾಲ್ಲೂಕಿನ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕ್ರೀಡಾಕೂಟ ದಲ್ಲಿ ಭಾಗವಹಿಸುವ ಮೂಲಕ ಕ್ರೀಡಾಕೂಟ ಯಶ್ವಸಿ ಗೊಳಿಸುವಂತೆ ಮನವಿ ಮಾಡಿದ್ದಾರೆ.