ದೇವನಹಳ್ಳಿ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ಕೆಯುಡಬ್ಲ್ಯೂ ಜೆ ಹೋರಾಟದ ಫಲ ಪತ್ರಕರ್ತರ ದಶಕಗಳ ಕನಸು ನನಸಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧ್ಯಕ್ಷ ಜಿ. ಶ್ರೀನಿವಾಸ್ ಹರ್ಷ ವ್ಯಕ್ತಪಡಿಸಿದರು.
ದೇವನಹಳ್ಳಿ ಪಟ್ಟಣದಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಜಿಲ್ಲಾ ಸಂಘದಲ್ಲಿ “ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿರುವುದಕ್ಕೆ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರೊಂದಿಗೆ ಸಿಹಿ ಹಂಚಿ ಸಂಭ್ರಮಿಸಿದರು”.
ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ವಿಶೇಷವಾಗಿ ಸ್ಮರಿಸಿ ಅಭಿನಂದಿಸಿದಿಸಿದರು.
ಕೆಯುಡಬ್ಲುಜೆ ರಾಜ್ಯ ಸಮಿತಿಯ ಸದಸ್ಯರಾದ ಸಿ.ಪಿ ಕುಸುಮಾ ಪರ್ವತರಾಜ್ ಮಾತನಾಡಿ ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ವತಿಯಿಂದ ಧನ್ಯವಾದ ಸಲ್ಲಿಸಿದರು.
ಕೆಯುಡಬ್ಲ್ಯೂ ಜೆ ಜಿಲ್ಲಾ ಖಜಾಂಚಿ ಶಾಂತಮೂರ್ತಿ ಮಾತನಾಡಿ ಅನ್ಯ ಸಂಘದ ಸದಸ್ಯರುಗಳು ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ಪತ್ರಕರ್ತರ ಉಚಿತ ಬಸ್ ಬಸ್ ಯೋಜನೆ ಕಾರಣಕರ್ತರೆಂದು ಸಾಮಾಜಿಕ ಜಾಲತಾಣದಲ್ಲಿ ವಿಷಯ ಹರಿಬಿಡುತ್ತಿದ್ದಾರೆ, ಅದು ಸತ್ಯಕ್ಕೆ ದೂರವಾದ ಮಾತು ಕೆಯುಡಬ್ಲ್ಯುಜೆಯ ಸುಮಾರು 20 ವರ್ಷಗಳ ನಿರಂತರ ಶ್ರಮದ ಫಲ ಎಂದರು.
ರಾಜ್ಯ ಸರ್ಕಾರದ ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಸ್ವಾಗತಾರ್ಹವಾಗಿದ್ದು ,ಇದನ್ನು ರಾಜ್ಯದೆಲ್ಲೆಡೆ ಸಂಚಾರಕ್ಕೆ ಅನುವು ಮಾಡಿ ಕೊಟ್ಟರೆ ಸಹಕಾರಿ ಎಂದು ಮನವಿ ಮಾಡುತ್ತಾ ಬಜೆಟ್ ನಲ್ಲಿ ಘೋಷಣೆ ಮಾಡಿರುವ ಬಸ್ ಪಾಸ್ ಯೋಜನೆಯನ್ನು ಕ್ರಮಬದ್ದವಾಗಿ ಕೂಡಲೇ ಜಾರಿಗೆ ತರಲು ವಾರ್ತಾ ಇಲಾಖೆ ಮುಂದಾಗಬೇಕು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ವಿನಂತಿಸಿದ್ದಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕೆಯುಡಬ್ಲುಜೆ ಜಿಲ್ಲಾ ಗೌರವಾಧ್ಯಕ್ಷ ಪಿಳ್ಳರಾಜು, ಪ್ರಧಾನ ಕಾರ್ಯದರ್ಶಿ ರಮೇಶ್, ಉಪಾಧ್ಯಕ್ಷ ಜ್ಯೋತಿಶ್ವರಪ್ಪ ,ಜಿಲ್ಲಾ ನಿರ್ದೇಶಕರುಗಳಾದ ಎಂ .ಆರ್. ನಾಗರಾಜ್, ದೇವನಂದಿನಿ, ವಿನಯ್, ರಫೀ ಉಲ್ಲಾ, ನಾಗರಾಜ್, ಶ್ರೀನಿವಾಸ್ ಗಾಂಧಿ, ಮಹೇಶ್ ತಾಲೂಕು ಉಪಾಧ್ಯಕ್ಷರುಗಳಾದ ಹರ್ಷ. ಪಿ ಮತ್ತು ನರಸಿಂಹಮೂರ್ತಿ, ಖಜಾಂಚಿ ಹೈದರ್ ಕಾರ್ಯದರ್ಶಿ ಮಧು, ತಾಲೂಕು ನಿರ್ದೇಶಕರಾದ ಬ್ರಹ್ಮರಾಂಭ, ಡಿ.ಸಿ ಪರಮಶಿವಯ್ಯ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು.