ಯಲಹಂಕ: ಬಾಬಾ ಸಾಹೇಬ್ ಅಂಬೇಡ್ಕರ್ ಕೇವಲ ಒಂದು ವರ್ಗದ ಆಸ್ತಿಯಲ್ಲ ಇಡಿ ದೇಶದ ಆಸ್ತಿ ಸಮಾಜದ ಎಲ್ಲ ವರ್ಗದ ಹಿರಿಯರಿಂದ ಕಿರಿಯರವರೆಗೂ ಅಂಬೇಡ್ಕರ್ ಹಾಗೂ ಸಂವಿಧಾನದ ಬಗ್ಗೆ ತಿಳಿದುಕೊಳ್ಳಬೇಕು. ಈ ನಿಟ್ಟಿನಲ್ಲಿ ಹುಸ್ಕೂರು ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಈ ಸಂಭ್ರಮ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು ಪ್ರತಿದಿನವೂ ಜಾತ್ರೆಯಂತೆ ಸಂಭ್ರಮಿಸಬೇಕು ಎಂದು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಕೈಗೊಂಡಿರುವ ಸಂವಿಧಾನ ಜಾಗೃತಿ ಜಾಥಾ ವನ್ನು ಉದ್ದೇಶಿಸಿ ಹುಸ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಾಕ್ಟರ್ ಬಿ ರಮೇಶ್ ಮಾತನಾಡಿದರು.
ಆಲೂರು ಗ್ರಾಮ ಪಂಚಾಯಿತಿಯಿಂದ ಹೊರಟ ಜಾಥ ಹುಸ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನಸಂದ್ರ ಕ್ರಾಸ್ ಗೆ ಆಗಮಿಸಿದ್ದು ಹುಸ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಾ. ಬಿ ರಮೇಶ್, ಉಪಾಧ್ಯಕ್ಷೆ ಕೆಂಪಮ್ಮ, ಈ ಓ, ರಮೇಶ್ ಪಿಡಿಒ ರಾಜೇಶ್ ಹಾಗೂ ಹಲವು ದಲಿತ ಪರ ಮುಖಂಡರು ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿಗೆ ಪುಷ್ಪ ನಮನ ಸಲ್ಲಿಸಿ ಅದ್ದೂರಿಯಾಗಿ ಬರಮಾಡಿಕೊಂಡರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರಥ ಸಂಚರಿಸಿದ್ದು ವಾದ್ಯಗೋಷ್ಠಿಗಳ ಮೂಲಕ ಭವ್ಯ ಮೆರವಣಿಗೆಯನ್ನು ಮಾಡಲಾಯಿತು.
ಬಳಿಕ ಹುಸ್ಕೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಅಳವಡಿಸಿದ್ದ 30 ಅಡಿಯ ಬೃಹತ್ ಕಟೌಟ್ ಗೆ ಪುಷ್ಪಾರ್ಚನೆ ಮಾಡಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಗ್ರಾ. ಪಂ. ವ್ಯಾಪ್ತಿಯ ದಲಿತಪರ ಸಂಘಟನೆಗಳ ಮುಖಂಡರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹರೀಶ್ ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು ಆಡಳಿತ ಸಿಬ್ಬಂದಿ ಉಪಸ್ಥಿತರಿದ್ದರು.