ಚಿಕ್ಕಬಳ್ಳಾಪುರ : ಪತಿಯ ಅಕ್ರಮ ಸಂಬAಧ ಆರೋಪ ಹಿನ್ನೆಲೆಯಲ್ಲಿ ನವವಿವಾಹಿತೆ ಡೆತ್ ನೋಟ್ ಬರೆದಿಟ್ಟು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕೊಂಡವಲಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಬೆಂಕಿ ಹಚ್ಚಿಕೊಂಡು ಕೆ ಎಸ್ ಜಯಶ್ರೀ (೨೫) ಆತ್ಮಹತ್ಯೆಗೆ ಶರಣಾಗಿರುವ ನವವಿವಾಹಿತೆ ಎಂದು ತಿಳಿದುಬAದಿದೆ.
ಜಯಶ್ರೀ ಆರು ತಿಂಗಳ ಹಿಂದೆ ಅಷ್ಟೆ ಚಂದ್ರಶೇಖರ್ ಎನ್ನುವವರನ್ನು ಮದುವೆಯಾಗಿದ್ದರು. ಶಿಡ್ಲಘಟ್ಟ ತಾಲೂಕಿನ ಕೊಂಡಪ್ಪನಹಳ್ಳಿ ಗ್ರಾಮದ ಚಂದ್ರಶೇಖರ್ಬೇ ರೆ ಯುವತಿಯ ಜೊತೆಗೆ ಸದಾ ಚಾಟಿಂಗ್ ಮಾಡುತ್ತಿದ್ದ. ಇದನ್ನು ಪ್ರಶ್ನಿಸಿದಕ್ಕೆ, ಚಂದ್ರಶೇಖರ್ ಜಯಶ್ರೀಗೆ ಕಿರುಕುಳ ನೀಡುತ್ತಿದ್ದ ಪತಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದು ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ.ಘಟನೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಚಂದ್ರಶೇಖರ್ ಅರೆಸ್ಟ್ ಮಾಡುವವರೆಗೂ ಶವ ಸಂಸ್ಕಾರ ಮಾಡಲ್ಲ ಎಂದು ಮೃತ ಜಯಶ್ರೀ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ