ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಇಂದು ಬೆಳಿಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ಡನೆಸಿದ್ದಾರೆ. ಸದಾಶಿವನಗರದ ಖರ್ಗೆ ನಿವಾಸಕ್ಕೆ ಆಗಮಿಸಿದ ಉಪಮುಖ್ಯಮಂತ್ರಿಯವರು ಬಹಳ ಹೊತ್ತಿನಕಾಲ ಪರಸ್ಪರ ಸಮಾಲೋಚನೆ ನಡೆಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಇದುವರೆಗೂ ಖರ್ಗೆಯವನ್ನು ಭೇಟಿ ಮಾಡದೆ ಇದ್ದ ಪರಮೇಶ್ವರ್ ಅವರು ಇಂದು ಭೇಟಿ ಸಂದರ್ಭದಲ್ಲಿ ಖರ್ಗೆಯವರಿಗೆ ಧನ್ಯವಾದ ತಿಳಿಸಿದ್ದಾರೆ. ತದನಂತರ ಸುದ್ದಿಗಾರರೊಂದಿಗೆ ಮಾತನಾಡಿ ಇದುವರೆಗೂ ಖರ್ಗೆ ಅವರನ್ನು ಭೇಟಿಯಾಗದೆಯಿದ್ದು, ಇದೀಗ ಭೇಟಿಯಾಗಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದೇನೆ ಎಂದಿದ್ದಾರೆ. ರಾಮಲಿಂಗಾರೆಡ್ಡಿ ರಾಜೀನಾಮೆಗೆ ಸಂಬಂಧಪಟ್ಟಂತೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅದೇನೂ ದೊಡ್ಡ ವಿಷಯವಲ್ಲ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ರಾಮಲಿಂಗಾರೆಡ್ಡಿ ಅವರು ಮಾತುಕತೆ ನಡೆಸಿದ್ದಾರೆ. ಅದು ಬೇಗ ಬಗೆಹರಿಯುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಸಚಿವ ಕೆ.ಎಚ್. ಮುನಿಯಪ್ಪ ಅವರು ಯಾವುದೇ ಅಸಮಾಧಾನ ಹೊಂದಿಲ್ಲ. ನಿನ್ನೆ ಮಧ್ಯಾಹ್ನ ರಾಹುಲ್ ಅವರೊಂದಿಗೆ ನಾವೇಲ್ಲಾ ಕೂತು ಮಾತುಕತೆ ನಡೆಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.



