ಬೆಂಗಳೂರು: ಪೊಲೀಸರ ಮುಂದೆ ಪವಿತ್ರಾ ಗೌಡ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ ಎಂದು ತಿಳಿದುಬಂದಿದೆ.ರೇಣುಕಾಸ್ವಾಮಿ ಮೆಸೇಜ್ ಬಗ್ಗೆ ಹೇಳಿ ತಪ್ಪು ಮಾಡಿದೆ ಎಂದು ವಿಚಾರಣೆ ವೇಳೆ ಪೊಲೀಸರ ಮುಂದೆ ಪವಿತ್ರಗೌಡ ಅಳಲು ತೋಡಿಕೊಂಡಿದ್ದಾರೆ.
ಕೊಲೆಯಾದ ರೇಣುಕಾಸ್ವಾಮಿ ಮೆಸೇಜ್ ಬಗ್ಗೆ ಹೇಳಿ ತಪ್ಪು ಮಾಡಿದೆ. ದರ್ಶನ್ಗೆ ಮೆಸೇಜ್ ಬಗ್ಗೆ ಹೇಳಿ ಘನಘೋರ ತಪ್ಪು ಮಾಡಿಕೊಂಡೆ. ಅಶ್ಲೀಲ ಮೆಸೇಜ್ ತೋರಿಸಿ ಘಟನೆ ಬಗ್ಗೆ ಹೇಳಿದ್ದೇ ಇಷ್ಟೆಲ್ಲಾ ಆಯ್ತು ಎಂದು ಪೊಲೀಸರ ಮುಂದೆ ಹೇಳಿದ್ದಾರೆ. ಅಶ್ಲೀಲ ಮೆಸೇಜ್ಗಳನ್ನು ದರ್ಶನ್ಗೆ ತೋರಿಸಿ ಹೇಳಬಾರದಿತ್ತು.
ಬದಲಾಗಿ ನಾನೇ ಈ ಬಗ್ಗೆ ಪೊಲೀಸರಿಗೆ ದೂರು ಕೊಡಬಹುದಿತ್ತು. ಅಶ್ಲೀಲ ಮೆಸೇಜ್ ಬಗ್ಗೆ ದೂರು ಕೊಟ್ಟಿದ್ರೆ ಕಾನೂನು ಕ್ರಮ ಆಗುತ್ತಿತ್ತು. ಅದನ್ನು ಬಿಟ್ಟು ಪ್ರತಿಯೊಂದು ಮೆಸೇಜ್ ತೋರಿಸಿ ಹೇಳಿದ್ದೆ ತಪ್ಪಾಯ್ತು. ಇದು ಕೊಲೆಯಾಗುವ ಹಂತಕ್ಕೆ ಹೋಗುತ್ತೆ ಅಂತ ಅಂದುಕೊಂಡಿರಲಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.