ಬೆಂಗಳೂರು: ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದ್ದು,ಮತದಾನಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ನಗರದ ಅವಧಿ ಮೀರಿ ತೆರೆದ ಬಾರ್ ಹಾಗೂ ರೆಸ್ಟೋರೆಂಟ್ಗಳಿಗೆ ಚುನಾವಣಾಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.ಅವಧಿ ಮೀರಿ ಬಾರ್ ತೆರೆದ ಒಂದು ಸಾವಿರಕ್ಕೂ ಹೆಚ್ಚು ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ಚುನಾವಣಾಧಿಕಾರಿಗಳು ನೋಟಿಸ್ ನೀಡಿದ್ದು, ದಾಖಲೆ ಇಲ್ಲದೇ ಮದ್ಯ ಮಾರಾಟ ಮಾಡುತ್ತಿದ್ದವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
ಚುನಾವಣಾ ಹಿನ್ನೆಲೆಯಲ್ಲಿ ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ಚುನಾವಣಾ ಆಯೋಗ ಕೆಲವೊಂದು ನಿಯಮ ಪಾಲನೆಗೆ ಸೂಚಿಸಿದ್ದು,ಅದರ ಮೇಲೆ ಜಿಲ್ಲಾ ಚುನಾವಣಾಧಿಕಾರಿಗಳು ನಿಗಾವಹಿಸಿದ್ದಾರೆ. ಅದೇ ರೀತಿಯಲ್ಲಿ ನಗರದಲ್ಲಿ ಬಾರ್ ಮತ್ತು ರೆಸ್ಟೋರೆಂಟ್ಗಳು, ಎಂಆರ್ಪಿಗಳು ನಿಯಮ ಉಲ್ಲಂಘನೆ ಮಾಡುತ್ತಿವೆ. ಸಮಯ ಮುಗಿದಿದ್ದರೂ ಬಾರ್ ಓಪನ್ ಮಾಡಿ ವ್ಯಾಪಾರ ವ್ಯವಹಾರ ಮಾಡುತ್ತಿದ್ದಾರೆ. ನಿಯಮಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ.
ಹೀಗಾಗಿ ಜಿಲ್ಲಾ ಚುನಾವಣಾಧಿಕಾರಿಗಳು ಒಂದು ಸಾವಿರಕ್ಕೆ ಹೆಚ್ಚು ಪ್ರಕರಣಗಳನ್ನ ದಾಖಲಿಸಿಕೊಂಡು ಬಾರ್ & ರೆಸ್ಟೋರೆಂಟ್ಗಳಿಗೆ ನೋಟಿಸ್ ನೀಡಲಾಗಿದೆ.
ಎಂಆರ್ಪಿ ಶಾಪ್ಗಳು ಕೂಡ ನಿಯಮಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಅಕ್ರಮವಾಗಿ ಮದ್ಯ ಸಾಗಾಟ ಮಾಡುವುದು ಕಂಡು ಬಂದಿದ್ದು, ಮದ್ಯ ಜಪ್ತಿ ಮಾಡಿದ್ದಾರೆ. ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವ ಹೊತ್ತಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಿ ಕೆಲವೊಂದು ಬಾರ್ಗಳನ್ನ ಮುಚ್ಚಿಸುವಂತಹ ಕೆಲಸಕ್ಕೆ ಮುಂದಾಗಲಿದ್ದಾರೆ.