ಕೆ.ಆರ್.ಪುರ: ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯವನ್ನು ಜೀವಂತವಾಗಿರಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ರಿಪಬ್ಲಿಕನ್ ಸೇನಾ ಪಕ್ಷದ ರಾಷ್ಟಿçÃಯ ಅಧ್ಯಕ್ಷ ಆನಂದ್ ರಾಜ್ ಅಂಬೇಡ್ಕರ್ ಅವರು ಹೇಳಿದರು.
ಕೆ.ಆರ್.ಪುರ ಸಮೀಪದ ವೈಟ್ ಫಿಲ್ಢ್ ನ ವಿಜಯನಗರದಲ್ಲಿರುವ ಭೀಮ್ ಪ್ರಜಾ ಸಂಘದ ರಾಜ್ಯಾಧ್ಯಕ್ಷ ವೈಟ್ ಫಿಲ್ಢ್ ಮುರುಗೇಶ್ ನೇತೃತ್ವದಲ್ಲಿ ನಡೆಯುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಉಚಿತ ಕ್ಯಾಂಟಿನ್ ಭೇಟಿ ನೀಡಿ ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ಅವಕಾಶವನ್ನು ಕಲ್ಪಿಸಿ ನಿರಂತರವಾಗಿ ತುಳಿತಕ್ಕೊಳಗಾದವರ ಪರವಾಗಿ ಜೀವನದುದ್ದಕ್ಕೂ ಕೊನೆಯುಸಿರು ಇದುವರೆಗೆ ಹೋರಾಡಿದ ವಿಶ್ವ ಮಾನವರಾಗಿದ್ದಾರೆ. ಅವರ ಆದರ್ಶ ಜೀವನ ಸಿದ್ದಾಂತವನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದರು.
ಬಡವರ ಹಸಿವು ನೀಗಿಸಲು ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನಲ್ಲಿ ಹಲವು ವರ್ಷಗಳಿಂದ ಉಚಿತ ಕ್ಯಾಂಟಿನ್ ನಡೆಸುವ ಮೂಲಕ ಮಹತ್ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ. ಈ ರೀತಿಯ ಕ್ಯಾಂಟಿನ್ ಗಳು ಎಲ್ಲಾ ಕಡೆ ತೆರೆಯುವ ಮೂಲಕ ಬಡವರ ಹಸಿವು ನೀಗಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯದಲ್ಲಿ ದೇಶದ ಅತಿ ಎತ್ತರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಲು ಭೀಮ್ ಪ್ರಜಾ ಸಂಘವು ಹಲವಾರು ವರ್ಷಗಳಿಂದ ಸತತವಾಗಿ ಹೋರಾಟ ಮಾಡಿಕೊಂಡು ಬರುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರತಿಮೆ ನಿರ್ಮಾಣ ಮಾಡಲು ಗಮನ ಹರಿಸಬೇಕು. ರಾಜ್ಯದಲ್ಲಿ ಅತಿ ಎತ್ತರದ ಪ್ರತಿಮೆ ನಿರ್ಮಾಣ ಆಗಬೇಕೆಂಬ ಮಹಾದಾಸೆ ಇದೆ ಎಂದು ಹೇಳಿದರು.
ಭೀಮ್ ಪ್ರಜಾ ಸಂಘದ ರಾಜ್ಯಾಧ್ಯಕ್ಷ ವೈಟ್ ಫಿಲ್ಢ್ ಮುರುಗೇಶ್ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ ಆನಂದ್ ರಾಜ್ ಅಂಬೇಡ್ಕರ್ ಅವರು ನಾವು ನಡೆಸಿಕೊಂಡು ಬರುತ್ತಿರುವ ಉಚಿತ ಕ್ಯಾಂಟಿನ್ ಅನ್ನು ಸಾಮಾಜೀಕ ಜಾಲತಾಣದಲ್ಲಿ ನೋಡಿ ಮೆಚ್ಚುಗೆ ವ್ಯಕ್ತಪಡಿಸಿ ಇಲ್ಲಿಗೆ ಬಂದು ವೀಕ್ಷಣೆ ಮಾಡಿದ್ದು ಜೀವನ ಸಾರ್ಥಕವೆನಿಸಿದೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕ್ಯಾಂಟಿನ್ ನಡೆಸಲು ಸಹಕಾರ ನೀಡುತ್ತೇನೆ ಯಾವುದೇ ಕಾರಣಕ್ಕೆ ಮುಚ್ಚದೆ ಅಂಬೇಡ್ಕರ್ ಹೆಸರಿನಲ್ಲಿ ಸೇವಾ ಕಾರ್ಯ ನೀಡುವಂತೆ ಅಭಯ ನೀಡಿದ್ದಾರೆ. ನನ್ನ ಕೆಲಸವನ್ನು ಮೆಚ್ಚಿ ದಕ್ಷಿಣ ಭಾರತದ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಸಮರ್ಥವಾಗಿ ಅಧಿಕಾರವನ್ನು ನಿಭಾಯಿಸುತ್ತೇನೆ ಎಂದರು.
ಕರ್ನಾಟಕ ಸಾಮರಸ್ಯ ಸಮಿತಿ ರಾಜ್ಯಾಧ್ಯಕ್ಷ ಕನ್ನಲ್ಲಿ ಕೃಷ್ಣಪ್ಪ, ರಿಪಬ್ಲಿಕನ್ ಸೇನಾ ಪಕ್ಷದ ರಾಜ್ಯಾಧ್ಯಕ್ಷ ಪ್ರಜ್ವಲ್, ಜಬಿ ಹುಸೇನ್, ರಮೇಶ್, ರಾಜಣ್ಣ, ಬಿ.ಕೃಷ್ಣಪ್ಪ ಇದ್ದರು.
`ಅಂಬೇಡ್ಕರ್ ಆಶಯವನ್ನು ಜೀವಂತವಾಗಿರಿಸಲು ಶ್ರಮಿಸಬೇಕು’



