ವೈಕುಂಠ ಏಕಾದಶಿ ಅಂಗವಾಗಿ ಇಂದು ಬೆಳಿಗ್ಗೆ ಬೆಂಗಳೂರಿನ ಶ್ರೀ ಕೃಷ್ಣ ಶ್ರೀ ವೆಂಕಟೇಶ್ವರ ದೇವಸ್ಥಾನ (ಇಸ್ಕಾನ್) ದೇವಾಲಯಕ್ಕೆ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಕೆ.ಗೋಪಾಲಯ್ಯ ಅವರು ಕುಟುಂಬಸ್ಥರೊAದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಉಪ ಮೇಯರ್ ಹೇಮಲತಾ ಗೋಪಾಲಯ್ಯ, ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ.ಮಂಜುನಾಥ್ ಗೌಡ, ವೆಂಕಟೇಶ್, ವೆಂಕಟೇಶ್ ಮೂರ್ತಿ, ಭರತ್ ರೆಡ್ಡಿ, ರಾಮಪ್ಪ, ಇಸ್ಕಾನ್ ದೇವಸ್ಥಾನದ ಮಾಧವ ಹರಿದಾಸ್ ಹಾಗೂ ಸ್ಥಳೀಯ ಮುಖಂಡರುಗಳು ಹಾಜರಿದ್ದರು.



