ಬೆಂಗಳೂರು: ಹುಬ್ಬಳ್ಳಿಯಲ್ಲಿ 31 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರಸೇವಕನನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ವಿಧಾನ ಸಭೆ ವಿಪಕ್ಷ ನಾಯಕ ಬಿಜೆಪಿ ಹಿರಿಯ ಮುಖಂಡ ಆರ್. ಅಶೋಕ್ ಕಬ್ಬನ್ಪಾರ್ಕ್ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ. ಕರಸೇವಕರನ್ನು ಹಿಡಿದು ಜೈಲಿಗೆ ಹಾಕುತ್ತಿ ದ್ದಾರೆ ಎಂದು ಅವರು ದೂರಿದ್ದಾರೆ. ಸೋನಿಯಾ ರಾಹುಲ್ ಸೂಚನೆ ಯಂತೆ ನೀಚತನಕ್ಕೆ ಇಳಿದಿದ್ದಾರೆ ಎಂದು ಕಿಡಿಕಾರಿದ್ದಾರೆ.
ರಾಹುಲ್ ಜೈಲಿಗೆ ಹೋಗಿದ್ದರಲ್ಲಾ ಅವರಿಗೆ ಏನು ಶಿಕ್ಷೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ.ಈ ಸಂದರ್ಭದಲ್ಲಿ ಅಶೋಕ್ ಸೇರಿದಂತೆ ಅವರೊಂದಿಗೆ ಪ್ರತಿಭಟನೆ ನಡೆಸುತ್ತಿದ್ದ ಸಂಸದ ಪಿ.ಸಿ.ಮೋಹನ್ ಎಂ.ಎಲ್.ಸಿ. ರವಿಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.