ಬೆಂಗಳೂರು: ಚಿಲ್ಲರೆ ಅಂಗಡಿ ನಡೆಸುತ್ತಿದ್ದ ಗುಣ ೨೮ ವರ್ಷದ ವ್ಯಕ್ತಿಯನ್ನು ಬ್ಯಾಟರಾಯನಪುರ ಪೊಲೀಸ್ ಠಾಣೆಯ ರೌಡಿಶೀಟರ್ಗಳು ನಿನ್ನೆ ರಾತ್ರಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುತ್ತಾರೆ.
ರಾತ್ರಿ ೮:೩೦ ಸುಮಾರಿಗೆ ಪಾಂತರ ಪಾಳ್ಯದ ಅಂಬೇಡ್ಕರ್ ಕಾಲೋನಿಯಲ್ಲಿ ಕೊಲೆ ನಡೆದಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ತಿಳಿಸಿದರು.
ಬ್ಯಾಟರಾಯನಪುರ ಪೊಲೀಸರು ಕೊಲೆ ಮೊಕದ್ದಮೆ ದಾಖಲು ಮಾಡಿಕೊಂಡು ಕೊಲೆ ಮಾಡಿದ ಆರೋಪಿಗಳನ್ನು / ರೌಡಿಶೀಟರ್ ಗಳನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿರುತ್ತಾರೆ.



