ಬೆಂಗಳೂರು : ಕನ್ನಡ ಚಲನಚಿತ್ರದ ಪ್ರಖ್ಯಾತ ನಟರಾದ ಉಪೇಂದ್ರ ಪ್ರಿಯಾಂಕಾ ದಂಪತಿಯ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಆರೋಪಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ವಿಕಾಸ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ, ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಪೊಲೀಸರೇ ಈ ಸೈಬರ್ ಖದೀಮರ ಜಾಲ ನೋಡಿ ಅಚ್ಚರಿಗೊಳಗಾಗಿದ್ದಾರೆ. ಇಲ್ಲಿನ ೨೦ರಿಂದ ೨೫ ವಯಸ್ಸಿನ ಯುವಕರು ಸೈಬರ ವಂಚನೆ ಜಾಲದಲ್ಲಿ ನಿರತರಾಗಿದ್ದು, ಊರಿನ ೧೫೦ ಮಂದಿ ಯುವಕರು ಸೈಬರ್ ಅಪರಾಧದಲ್ಲೇ ತೊಡಗಿಗೊಂಡಿರುವ ಆಘಾತಕಾರಿ ವಿಷಯ ಈ ವೇಳೆ ಬೆಳಕಿಗೆ ಬಂದಿದೆ.
ಕಳೆದ ಸೆ.೧೫ರಂದು ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಆಗಿತ್ತು. ಆನ್ಲೈನ್ನಲ್ಲಿ ಕೆಲ ವಸ್ತುಗಳನ್ನು ಪ್ರಿಯಾಂಕಾ ಉಪೇಂದ್ರ ಬುಕ್ ಮಾಡಿದ್ದರು. ಈ ವೇಳೆ ಮೊಬೈಲ್ಗೆ ಲಿಂಕ್ ಬಂದಿದ್ದು, ಆ ಲಿಂಕ್ ಅನ್ನು ಪ್ರಿಯಾಂಕ ಕ್ಲಿಕ್ ಮಾಡಿದ್ದರು. ಬಳಿಕ ನಟಿ ಪ್ರಿಯಾಂಕಾ ವಾಟ್ಸಾಪ್ ಹ್ಯಾಕ್ ಮಾಡಿದ್ದ ಖದೀಮ, ಅವರ ಸಂಪರ್ಕದಲ್ಲಿದ್ದವರಿಗೆ ೫೫ ಸಾವಿರ ಹಣ ಕಳುಹಿಸುವಂತೆ ಮೆಸೇಜ್ ಮಾಡಿದ್ದ. ಈ ವೇಳೆ ಆರೋಪಿ ಯಾರೆಂದು ತಿಳಿಯಲು ಯತ್ನಿಸಿರುವ ಪ್ರಿಯಾಂಕಾ, ಪತಿ ಉಪೇಂದ್ರ ಹಾಗೂ ಮ್ಯಾನೇಜರ್ ನಂಬರ್ನಿಂದ ಕರೆ ಮಾಡಿದ್ದರು. ಬಳಿಕ ಮ್ಯಾನೇಜರ್ ಹಾಗೂ ಉಪೇಂದ್ರ ಮೊಬೈಲ್ ಕೂಡ ಹ್ಯಾಕ್ ಆಗಿತ್ತು. ಹಣ ಅಗತ್ಯವಿದೆ ಎಂದು ಪ್ರಿಯಾಂಕ ಅವರ ವಾಟ್ಸಾ÷್ಯಪ್?ನಿಂದ ಆರೋಪಿ ಹಲವರಿಗೆ ಮೆಸೇಜ್ಮಾಡಿದ್ದು, ಈ ವೇಳೆ ಪ್ರಿಯಾಂಕಾ ಅವರೇ ಸಂದೇಶ ಕಳುಹಿಸಿದ್ದು ಎಂದು ಕೆಲವರು ಹಣ ಹಾಕಿದ್ದಾರೆ.
ಸ್ವತಃ ಉಪೇಂದ್ರ ಪುತ್ರ ಕೂಡ ತಾಯಿ ಅಕೌಂಟ್ಗೆ ಐವತ್ತು ಸಾವಿರ ಹಣಹಾಕಿದ್ದರು. ಇನ್ನು ಕೆಲವರು ಅನುಮಾನಗೊಂಡು ಪ್ರಿಯಾಂಕಾ ಅವರ ನಂಬರ್ಗೆ ಕರೆ ಮಾಡಿದರೆ ಕಾಲ್? ಕಟ್?? ಆಗುತ್ತಿತ್ತು. ವಿಷಯ ಗೊತ್ತಾಗುತ್ತಿದ್ದಂತೆ ಸದಾಶಿವನಗರ ಠಾಣೆಗೆ ಈ ಬಗ್ಗೆ ಪ್ರಿಯಾಂಕಾ ದೂರು ನೀಡಿದ್ದರು. ಆದರೆ, ಅದಾಗಲೇ ಸೈಬರ್ ವಂಚಕನ ಅಕೌಂಟ್ಗೆ ಒಂದೂವರೆ ಲಕ್ಷ ರೂಪಾಯಿ ಹಣ ವರ್ಗಾವಣೆ ಆಗಿತ್ತು.ದೂರು ದಾಖಲಾಗುತ್ತಿದ್ದಂತೆ ಅಲರ್ಟ್ ಆದ ಪೊಲೀಸರು, ಆರೋಪಿ ಪತ್ತೆಗೆ ಬಲೆ ಬೀಸಿದ್ದರು. ತನಿಖೆ ವೇಳೆ ಆರೋಪಿ ಬಿಹಾರದ ದಶರತಪುರದ ನಿವಾಸಿ ಎನ್ನುವುದು ಗೊತ್ತಾಗಿತ್ತು.



