ಬೆಂಗಳೂರು: ಬ್ರಹ್ಮಚರ್ಯದಿಂದ ಗೃಹಸ್ತಾಶ್ರಮಕ್ಕೆ ಕಾಲಿಡಲು ಅಣಿಯಾಗುತ್ತಿದ್ದ ಆಟೋ ಚಾಲಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆಗೈದಿರುವ ದುರ್ಘಟನೆ ಟಿಂಬರ್ಲೇಔಟ್ನಲ್ಲಿ ನಿನ್ನೆ ರಾತ್ರಿ ನಡೆದಿದೆ.
ಕೊಲೆಯಾದ ಅರುಣ್ಗೆ (24) ಮುಂದಿನ ತಿಂಗಳು ಮದುವೆ ನಿಗಧಿಯಾಗಿತ್ತು. ಆದರೆ, 10ಕ್ಕೂ ಹೆಚ್ಚು ದುಷ್ಕರ್ಮಿಗಳು ಅರಣ್ನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ಪರಿಶೀಲಿಸಿದ್ದು, ಕೊಲೆಗೆ ಕಾರಣವೇನು ಎನ್ನುವುದನ್ನು ತನಿಖೆ ಕೈಗೊಂಡಿದ್ದಾರೆ.
ಆಟೋ ಚಾಲಕ ಅರುಣ್ ಯುವತಿಯೊಬ್ಬಳನ್ನ ಪ್ರೀತಿಸುತ್ತಿದ್ದ. ಆ ಪ್ರೀತಿಯೊಂದಿಗೆ ಮದುವೆಯಾಗಿ ಸಂಸಾರ ಶುರು ಮಾಡಬೇಕಿದ್ದ. ಅದಕ್ಕೆ ಅಂತಾಲೇ ಮುಂದಿನ ತಿಂಗಳು ಮದುವೆ ನಿಗಧಿಯಾಗಿತ್ತು., ದುಷ್ಕರ್ಮಿಗಳು ಅರುಣ್ನನ್ನು ಸಪ್ತಪದಿ ತುಳಿಯಲು ಬಿಟ್ಟಿಲ್ಲ. ಪ್ರೀತಿಯ ಹುಡುಗಿ ಜೊತೆ ಮದುವೆಯಾಗಬೇಕಿದ್ದ ಅರುಣ್ ಜೀವ ತೆಗೆದಿದ್ದಾರೆ