This is the title of the web page
This is the title of the web page

ಬಿಎಸ್ಪಿ ಪಕ್ಷದ ಅಭ್ಯರ್ಥಿ ಡಾ.ವೈ.ಚಿನ್ನಪ್ಪ ಚಿಕ್ಕಹಾಗಡೆ ಮತಯಾಚನೆ

ಆನೇಕಲ್: ತಾಲ್ಲೂಕಿನ ದೊಮ್ಮಸಂದ್ರ ಗ್ರಾಮದಲ್ಲಿ ಬಿಎಸ್ಪಿ ಪಕ್ಷದ ಅಭ್ಯರ್ಥಿ ಡಾ.ವೈ ಚಿನ್ನಪ್ಪ ಚಿಕ್ಕಹಾಗಡೆ ರವರು ಮೆನೆಮನೆಗೂ ತೆರಳಿ ಮತಯಾಚಿಸಿದರು.

ಇನ್ನೂ ಇದೇ ವೇಳೆ ಜಿಲ್ಲಾ ಉಪಾಧ್ಯಕ್ಷ ಗೌರಿಶಂಕರ್ ಮಾತನಾಡಿ, ಆನೇಕಲ್ ತಾಲೂಕಿನಲ್ಲಿ ಈ ಭಾರಿ ಆನೆ
ಬರುವುದು ಶತ ಸಿದ್ದವಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ವಲಸೆ ಬಂದಿದ್ದು, ಎಅ.ಚಿನ್ನಪ್ಪ ವೈ ಚಿಕ್ಕಹಾಗಡೆರವರು ಕಳೆದ 25 ವರ್ಷಗಳ ಕಾಲದಿಂದಲೂ ಸಮಾಜ ಸೇವೆ ಮಾಡುತ್ತಿದ್ದು,

ಎರಡು ಭಾರಿ ಲೋಲಸಭೆ ಚುನಾವಣೆಗೆ ಸ್ಪರ್ಧಿಸಿದ್ದು, ಐದು ವರ್ಷಗಳ ಕಾಲ ಗ್ರಾಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಮಾಡಲಾಗಿದೆ ಇದನ್ನು ಗುರುತಿಸಿ ಭರತ ಸರ್ಕಾರವು ರಾಷ್ಟ್ರೀಯ ಯುವ ಪ್ರಶಸ್ತಿಯನ್ನು ನೀಡಿ ಪುರಸ್ಕಾರಿಸಲಾಗಿದೆ ಹಾಗಾಗಿ ಮುಂದಿನ ದಿನಗಳಲ್ಲಿ ತಾಲ್ಲೂಕಿನ ಜನತೆ ಬಿಎಸ್ಪಿ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.