ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳಿ ಬಳಿ ಒಂದು ಹೆಣ್ಣು ಹುಲಿ ಹಾಗೂ ಮೂರು ಮರಿ ಹುಲಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.
ಕಳೆದ ಹಲವಾರು ದಿನಗಳಿಂದ ಹುಲಿ ಜಾನುವಾರುಗಳ ಮೇಲೆ ದಾಳಿ ಮಾಡಿ ಬಲಿ ಪಡೆದಿತ್ತು. ಇದರಿಂದ ರೈತರಲ್ಲಿ ಆತಂಕ ಸೃಷ್ಟಿಯಾಗಿತ್ತು. ಜಮೀನುಗಳಿಗೆ ಹೋಗಲು ರೈತರು ಭಯಪಡುತ್ತಿದ್ದರು. ಇದರಿಂದ ಗ್ರಾಮಸ್ಥರು ಹುಲಿ ಸೆರೆಗೆ ಮನವಿ ಮಾಡಿದ್ದರು. ಜನರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಿ, ಅರವಳಿಕೆ ಚುಚ್ಚುಮದ್ದು ನೀಡಿ ಹುಲಿಯನ್ನು ಸೆರೆ ಹಿಡಿದಿದ್ದಾರೆ. ಆನೆ ಸೆರೆಯಿಂದ ಕಲ್ಲಹಳ್ಳಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
“ಹೆಣ್ಣುಹುಲಿ ಸೇರಿದಂತೆ ಮೂರು ಮರಿ ಹುಲಿಗಳ ಸೆರೆ”



