ಬೆಂಗಳೂರು: ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು ಎಂದು ಡಿಸಿಎಂ ಡಿಕೆ ಶಿವಕುಮಾರ್ ಭಾವುಕ ಸಂದೇಶವೊAದನ್ನ ಹಂಚಿಕೊAಡಿದ್ದಾರೆ.
ಸಿಎಂ ಹುದ್ದೆಗೆ ಸಿದ್ದರಾಮಯ್ಯ ಅವರು ನೀಡಿದ ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೆ ಎಕ್ಸ್ ಪೋಸ್ಟ್ನಲ್ಲಿ ಸುದೀರ್ಘ ಸಂದೇಶ ಹಂಚಿಕೊಂಡಿರುವ ಅವರು, ಸಿದ್ದರಾಮಯ್ಯ ಹಾಗೂ ತಮ್ಮ ನಡುವಿನ ಬಾಂಧವ್ಯಕ್ಕೆ ಸಾಕ್ಷಿಯಾಗುವ ವಿಶೇಷ ವಿಡಿಯೋವನ್ನೂ ಹಂಚಿಕೊಂಡಿದ್ದಾರೆ.
ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು.
ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಬೆಳೆದು, ಹೋರಾಟದ ಮೂಲಕ ರಾಜಕೀಯಕ್ಕೆ ಬಂದು, ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನನ್ನ ಆತ್ಮೀಯರಾದ ಶ್ರೀ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ, ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಜನಮಾನಸದಲ್ಲಿ ನೆಲೆಸಿರುವ ಅವರು, ಭಾರತೀಯ ರಾಜ ಕಾರಣದ ಧೀಮಂತ ನಾಯಕ. ಜನಪರ ಯೋಜನೆಗಳಿಂದ ಹಿಡಿದು ರಾಜ್ಯದಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ.
ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್



