ಮಂಡ್ಯ: ಇಂದಿನಿAದ ಮಂಡ್ಯದ ಶ್ರೀರಂಗಪಟ್ಟಣ ದಸರಾಉತ್ಸವಕ್ಕೂ ಚಾಲನೆ ಸಿಗಲಿದೆ.
ಇಂದಿನಿAದ ೪ ದಿನಗಳ ಕಾಲ ನಡೆಯಲಿರುವ ಈ ಉತ್ಸವಕ್ಕೆ ನಟ, ನಿರ್ದೇಶಕಟಿ.ಎಸ್ ನಾಗಾಭರಣಅವರು ಮಧ್ಯಾಹ್ನ ೨:೩೦ ರಿಂದ ೩ ಗಂಟೆಗೆ ಸಲ್ಲುವ ಶುಭ ಲಗ್ನದಲ್ಲಿಉದ್ಘಾಟನೆ ನೆರವೇರಿಸಲಿದ್ದಾರೆ. ಶ್ರೀರಂಗಪಟ್ಟಣದ ಕಿರಂಗೂರು ಬಳಿ ಬನ್ನಿಮಂಟಪದಲ್ಲಿ ಪೂಜಾಕೈಂಕರ್ಯ ನೆರವೇರಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ.
ಇದಾದ ಬಳಿಕ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮೂಲಕ ಜಂಬೂಸವಾರಿಗೂ ಚಾಲನೆ ನೀಡಲಾಗುತ್ತದೆ. ಶ್ರೀರಂಗಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜಂಬೂಸವಾರಿ ಮೆರವಣಿಗೆ ಸಾಗಲಿದೆ. ಮೈಸೂರುದಸರಾಕ್ಕೆ ಆಗಮಿಸಿರುವ ಮಹೇಂದ್ರ ಆನೆ ಅಂಬಾರಿ ಹೊತ್ತು ಹೆಜ್ಜೆ ಹಾಕಲಿದ್ದಾನೆ. ಇಲ್ಲಿನ ಬನ್ನಿ ಮಂಟಪದಿAದ ಶುರುವಾಗಿ ಶ್ರೀರಂಗನಾಥ ದೇವಾಲಯದ ವರೆಗೆ ಮೆರವಣಿಗೆ ಸಾಗಲಿದೆ.
ಇನ್ನೂಜಂಬೂ ಸವಾರಿಗೆ ವಿವಿಧ ಕಲಾತಂಡಗಳ ಸಾಂಸ್ಕöÈತಿಕ ವೈಭವ ಮೆರುಗು ನೀಡಲಿದೆ. ಬ್ಯಾಂಡ್, ಪೂಜಾಕುಣಿತ, ವೀರಗಾಸೆ, ನಗಾರಿ, ಜಡೆಕೋಲಾಟ, ಗಾರುಡಿ ಗೊಂಬೆ, ತಮಟೆ, ದೊಣ್ಣೆವರಸೆ, ಡೊಳ್ಳು ಕುಣಿತ, ಕಂಸಾಳೆ, ಕೊಂಬು-ಕಹಳೆ ಹಾಗೂ ಸ್ತಬ್ಧ ಚಿತ್ರಗಳ ಮೆರವಣಿ ನಡೆಯಲಿದೆ.