ಬೆಂಗಳೂರು: ಮಹಾರಾಷ್ಟ್ರ ಪೊಲೀಸರು ಕರ್ನಾಟಕಕ್ಕೆ ಬಂದು ಡ್ರಗ್ ಟ್ರಾಫಿಕಿಂಗ್ ಮಾಡುವವರನ್ನು ಪತ್ತೆ ಹೆಚ್ಚಿದ್ದು ನೋಡಿದರೆ ಡ್ರಗ್ ಮಾಫಿಯಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ಇದೆಯೇ ಎನ್ನುವ ಅನುಮಾನ ಮೂಡುತ್ತಿದೆ, ಈಗಲಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಉಡ್ತಾ ಪಂಜಾಬ್ ರೀತಿ ಉಡ್ತಾ ಕರ್ನಾಟಕ ಆಗಲಿದೆ ಎಂದು ಬಿಜೆಪಿ ಎಚ್ಚರಿಸಿದೆ.
ಗದಗದಲ್ಲಿ ಸುದ್ದಿಗಾರರೊಂದಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು, ರೈತರ ಗೊಬ್ಬರ ಕಳ್ಳತನ ಮಡುವವರಿಗೆ ಕಠಿಣ ಕಾನೂನಿನಲ್ಲ, ಡ್ರಗ್ ಮಾರುವವರಿಗೂ ಬಿಗಿ ಕಾನೂನಿಲ್ಲ. ಕಳ್ಳಭಟ್ಟಿ ಮಾಡುವವರಿಗೂ ಬಿಗಿ ಕಾನೂನಿಲ್ಲ ಈ ರಾಜ್ಯ ಸಂಪೂರ್ಣ ಕಾನೂನು ಸುವ್ಯವಸ್ಥೆ ಅಲ್ಲದೇ ಅನೈತಿಕ ಚಟುವಟಿಯಿಕೆಯಿಂದ ಕೂಡಿದ ರಾಜ್ಯವಾಗಿದೆ ಎಂದು ಕಿಡಿಕಾರಿದರು.
ಈ ಸರ್ಕಾರ ಸಂಪೂರ್ಣ ಕಚ್ಚಾಟದಲ್ಲಿ ಮುಳುಗಿದೆ. ಹೀಗಾಗಿ ಡ್ರಗ್ ಮಾಫಿಯಾ ಮುಕ್ತವಾಗಿ ಕೆಲಸ ಮಾಡುತ್ತಿದೆ. ಇದು ಡ್ರಗ್ ಮಾಫಿಯಾ ನಿಯಂತ್ರಣದಲ್ಲಿರುವ ಸರ್ಕಾರವಾಗಿದೆ. ರಾಜ್ಯ ಸರ್ಕಾರ ದ್ವೇಷ ಭಾಷಣ ಮಾಡುವುದರ ವಿರುದ್ಧ ಕಾನೂನು ತರುವ ಬದಲು ಇಂತಹದ್ದಕ್ಕೆ ಕಡಿವಾಣ ಹಾಕುವ ಕಾನೂನು ತರಬೇಕಿತ್ತು ಎಂದು ಹೇಳಿದರು.



