ದೇವನಹಳ್ಳಿ: ಮಹಿಳೆಯರು ಆರ್ಥಿಕವಾಗಿ ಇತರರ ಮೇಲೆ ಅವಲಂಬಿತರಾಗದೇ ಸ್ವತಂತ್ರವಾಗಿ ಜೀವನದಲ್ಲಿ ಮುಂದೆ ಬರಲು ಇಂತಹ
ಸ್ತ್ರೀ ಸ್ವಾವಲಂಬಿ ಯೋಜನೆಗಳನ್ನು ಜಾರಿಗೆ ತಂದಿದೆ. ಸಂಘಸಂಸ್ಥೆಗಳು ಸಾಲದ ಮರುಪಾವತಿಯಲ್ಲಿ ಮಹಿಳೆಯರೇ ಮುಂದು, ಅವರು ದಾಖಲೆ ಮಾಡಿದ್ದಾರೆ ಎಂದು ಆಹಾರನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವ.ಕೆ.ಹೆಚ್.ಮುನಿಯಪ್ಪ ಹೇಳಿದರು.
ದೇವನಹಳ್ಳಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ “370 ಸ್ವಸಹಾಯಸಂಘಗಳಿಗೆ ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಚೆಕ್ ವಿತರಣೆ ಮತ್ತು ಡಿಜಿಟಲ್ ಗ್ರಂಥಾಲಯಗಳಿಗೆ ಕಂಪ್ಯೂಟರ್ ವಿತರಣೆ ಕಾರ್ಯಕ್ರಮ “ಆಹಾರ ನಾಗರೀಕ ಸರಬರಾಜು ಇಲಾಖೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಉಸ್ತುವಾರಿ ಸಚಿವ.ಕೆ.ಹೆಚ್.ಮುನಿಯಪ್ಪ ದೀಪಬೆಳಗುವುದರ ಮೂಲಕ ಉದ್ಘಾಟಿಸಿದರು.
ಡಾ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ನಾನು ಸಹ ಸಂಸದನಾಗಿದ್ದ ಸಂದರ್ಭದಲ್ಲಿ ಸೋನಿಯಾಗಾಂಧಿಯವರ ಆಶಯದಂತೆ ಮಹಿಳೆಯರ ಸಬಲೀಕರಣಕ್ಕಾಗಿ ತಂದಂತಹ ಆರ್ಥಿಕ ಅಭಿವೃದ್ಧಿಯ ಯೋಜನೆಯ ಇದಾಗಿದ್ದು ಎನ್ಎಲ್ಆರ್ ಎಂ ಯೋಜನೆಯಡಿಯಲ್ಲಿ ಮಹಿಳೆಯರನ್ನು ಆರ್ಥಿಕವಾಗಿ ಸಧೃಡವಾಗಿಸಲು ಹಾಗೂ ನಾಯಕತ್ವದ ಗುಣಗಳನ್ನು ಹೆಚ್ಚಿಸುವ ಉದ್ದೇಶದೊಂದಿಗೆ ಸ್ವಸಹಾಯ ಸಂಘಗಳ ಮುಖಾಂತರ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ.ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳು ಸದಸ್ಯತ್ವ ಪಡೆದು ಡಿಜಿಟಲ್ ಗ್ರಂಥಾಲಯ ಸದುಪಯೋಗಪಡಿಸಿಕೊಂಡು ವಿದ್ಯಾಭ್ಯಾಸದಲ್ಲಿ ಉನ್ನತಿ ಸಾಧಿಸಿ ಎಂದರು.
ಕಾರ್ಯಕ್ರಮದಲ್ಲಿ ತಾಲೂಕಿನ ಸ್ತ್ರೀ ಸಾಮರ್ಥ್ಯ ಹೆಚ್ಚಿಸಲು ಸ್ವಸಹಾಯ ಸಂಘ ಗುಂಪುಗಳಿಗೆ ಚೆಕ್ ವಿತರಣೆ ಮತ್ತು ತಾಲೂಕಿನ ಗ್ರಾಮ ಪಂಚಾಯತಿಯ ಡಿಜಿಟಲ್ ಗ್ರಂಥಾಲಯಗಳಿಗೆ ಕಂಪ್ಯೂಟರ್ ವಿತರಣೆ ಮಾಡಿ ನಂತರ ಸ್ವಸಹಾಯ ಸಂಘದ ಬಿಜಿಎಂ ಮಹಿಳೆರಿಗೆ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ದೇವನಹಳ್ಳಿ ತಹಸೀಲ್ದಾರ್ ಶಿವರಾಜ್, ಇಒ ಶ್ರೀನಾಥ್ ಗೌಡ, ಜಿಲ್ಲಾ ಯೋಜನಾಧಿಕಾರಿ ವಿಠಲ್ ಕಾವಳೆ, ಜಿಪಂ ಮಾಜಿ ಅಧ್ಯಕ್ಷ ಚನ್ನಹಳ್ಳಿ ರಾಜಣ್ಣ, ಕೆಪಿಸಿಸಿ ಸದಸ್ಯರಾದ ವಿ.ಶಾಂತ್ ಕುಮಾರ್, ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಸಿ.ಜಗ
ನ್ನಾಥ್, ಎಸ್ ಸಿ ಘಟಕದ ಅಧ್ಯಕ್ಷ ಚೌಡಪ್ಪನಹಳ್ಳಿ ಲೋಕೇಶ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಪ್ರಸನ್ನಕುಮಾರ್, ವಿಜಯಪುರ ಬಲಾಕ್ ಕಾಂಗ್ರೇಸ್ ಅಧ್ಯಕ್ಷರಾಮಚಂದ್ರಪ್ಪ, ಬಿದಲೂರು ಗ್ರಾ. ಪಂ ಅಧ್ಯಕ್ಷ ಎಸ್.ಪಿ.ಮುನಿರಾಜು, ಜಾಲಿಗೆ ಗ್ರಾಪಂ ಅಧ್ಯಕ್ಷ ಆನಂದ್ ಕುಮಾರ್, ಪುರಸಭಾ ಸದಸ್ಯರಾದ ವೇಣುಗೋಪಾಲ್ ಮತ್ತು ರಘು ಮುಖಂಡರಾದ ಶಂಕರಪ್ಪ, ಲಕ್ಷ್ಮಣಗೌಡ, ಎಸ್ .ಆರ್ ರವಿಕುಮಾರ್ ಸೇರಿದಂತೆ ತಾಲೂಕಿ ಗ್ರಾಮ ಪಂಚಾಯತಿಯ ಪಿಡಿಒಗಳು ಮತ್ತು ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ಭಾಗವಹಿಸಿದ್ದರು.