ಕೋಲಾರ: ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕೃತ ಉಲ್ಲಾಸ್ ನವಭಾರತ ಸಾಕ್ಷರತಾ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾದ್ಯಂತ ಒಟ್ಟು 32 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ 189 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಸಾಕ್ಷರತಾ ಮೌಲ್ಯ ಮಾಪನ ನಡೆಯಿತು ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಉಮಾ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಪ್ರವೀಣ್ ಪಿ.ಬಾಗೇವಾಡಿ ಅವರ ಮಾರ್ಗದರ್ಶನದಲ್ಲಿ ಭಾನುವಾರ ಜಿಲ್ಲಾಧ್ಯಂತ ಪರೀಕ್ಷೆ ನಡೆದಿದ್ದು, 2025-26 ನೇ ಸಾಲಿನಲ್ಲಿ ಜಿಲ್ಲೆಯ ಅತ್ಯಂತ ಕಡಿಮೆ ಸಾಕ್ಷರತೆ ಹೊಂದಿರುವ 32 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿ
ಕೊಂಡು ಲಿಂಕ್ ಡಾಕ್ಯುಮೆಂಟ್ ಅನುದಾನದಡಿಯಲ್ಲಿ 6000 ಅನಕ್ಷರಸ್ಥರನ್ನು ಸಾಕ್ಷರರನ್ನಾಗಿಸುವ ಗುರಿಯೊಂದಿಗೆ ಮೂಲ ಸಾಕ್ಷರತಾ ಕಾರ್ಯಕ್ರಮ ಅನುಷ್ಟಾನಗೊಳಿಸಲಾಗಿದೆ. ಭಾನುವಾರದ ಮೌಲ್ಯಮಾಪನ ಪರೀಕ್ಷೆಯಲ್ಲಿ 6000 ಕಲಿಕಾರ್ಥಿಗಳು ನವ ಸಾಕ್ಷರಾಗುತ್ತಾರೆ. ಎಂದ ಅವರು, 2025-26ನೇ ಸಾಲಿನ ಜಿಲ್ಲೆಯ ಲಿಂಕ್ ಡಾಕ್ಯೂಮೆಂಟ್ ಅನುದಾನದಡಿಯಲ್ಲಿ ಸಾಕ್ಷರತಾ ಕಾರ್ಯಕ್ರಮಕ್ಕೆ ಜಿಲ್ಲೆಯ 6 ತಾಲ್ಲೂಕುಗಳ ಆಯ್ದ 32 ಗ್ರಾಮ ಪಂಚಾಯತಿಗಳಲ್ಲಿ ಒಟ್ಟು 6000 ಅನಕ್ಷರಸ್ಥರಿಗೆ 189 ಪರೀಕ್ಷಾ ಕೇಂದ್ರಗಳುಲ್ಲಿ ಪರೀಕ್ಷೆ ಇಂದು ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳು ಪರೀಕ್ಷೆ ಕೇಂದ್ರದ ಉಸ್ತುವಾರಿ ವಹಿಸಿದ್ದು, 03 ಅವಧಿಗಳಲ್ಲಿ ಪರೀಕ್ಷೆ ನಡೆಯಿತು ಎಂದು ತಿಳಿಸಿದರು.
ಬಂಗಾರಪೇಟೆ ತಾಲ್ಲೂಕಿನ 4 ಗ್ರಾ.ಪಂಗಳ 26 ಪರೀಕ್ಷಾ ಕೇಂದ್ರಗಳಲ್ಲಿ 1 ಸಾವಿರ ಕಲಿಕಾರ್ಥಿಗಳು,ಕೆಜಿಎಫ್ ತಾಲ್ಲೂಕಿನಲ್ಲಿ 3 ಗ್ರಾ.ಪಂಗಳ 5 ಪರೀಕ್ಷಾ ಕೇಂದ್ರಗಳಲ್ಲಿ 250 ಕಲಿಕಾರ್ಥಿಗಳು, ಕೋಲಾರ ತಾಲ್ಲೂಕಿನ 13 ಗ್ರಾ.ಪಂಗಳಲ್ಲಿ 74 ಪರೀಕ್ಷಾ ಕೇಂದ್ರಗಳಲ್ಲಿ 1750 ಕಲಿಕಾರ್ಥಿಗಳು, ಮಾಲೂರು ತಾಲ್ಲೂಕಿನ 4 ಗ್ರಾ.ಪಂಗಳಿAದ 35 ಕೇಂದ್ರಗಳಲ್ಲಿ 1ಸಾವಿರ ಮಂದಿ, ಮುಳಬಾಗಿಲು ತಾಲ್ಲೂಕಿನ 6 ಗ್ರಾ.ಪಂಗಳಲ್ಲಿ 46 ಪರೀಕ್ಷಾ ಕೇಂದ್ರಗಳಲ್ಲಿ 1750 ಮಂದಿ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 2 ಗ್ರಾ.ಪಂಗಳಿAದ 3 ಪರೀಕ್ಷಾ ಕೇಂದ್ರಗಳಲ್ಲಿ 250 ಮಂದಿ ಪರೀಕ್ಷೆ ಬರೆದಿದ್ದಾರೆ ಎಂದರು.



