ಬೆಂಗಳೂರು: ಬಿಗ್ ಬಾಸ್ ರಂಜಿತ್ ಮೇಲೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದಡಿ ದೂರು ಜಗದೀಶ್ ಅವರು ದೂರು ನೀಡಿದ್ದು ಪೊಲೀಸರು ಎನ್ಸಿಆರ್ ದಾಖಲಿಸಿದ್ದಾರೆ.೨೦೧೮ ರಿಂದ ಅಮೃತಹಳ್ಳಿಯ ಫ್ಲಾ÷್ಯಟ್ನಲ್ಲಿ ಜಗದೀಶ್ ಕುಟುಂಬ ವಾಸವಾಗಿದ್ದು, ೨೦೨೫ ರಿಂದ ಇದೇ ಫ್ಲಾ÷್ಯಟ್ ನಲ್ಲಿ ಅಕ್ಕ ಬಾವನ ಜೊತೆ ರಂಜಿತ್ ವಾಸವಿದ್ದರು. ಈಗ ಈ ಮನೆ ನನ್ನದು ಎಂದು ಅಕ್ಕ ತಮ್ಮನ ನಡುವೆ ಗಲಾಟೆ ನಡೆದಿದೆ. ರಂಜಿತ್ , ರಂಜಿತ್ ಪತ್ನಿ ಜೊತೆ ರಂಜಿತ್ ಅಕ್ಕ ಗಲಾಟೆ ಮಾಡಿ ಒಬ್ಬರಿಗೊಬ್ಬರು ಹಲ್ಲೆ ನಡೆಸಿದ್ದಾರೆ.
ಮನೆ ಬಿಟ್ಟು ಹೋಗದೆ ಈ ಮನೆ ನನ್ನದು ಎಂಧು ರಂಜಿತ್ ಜೀವ ಬೆದರಿಕೆ ಹಾಕಿದ್ದಾರೆ ಎಂದು ಜಗದೀಶ್ ದೂರು ನೀಡಿದ್ದಾರೆ. ದೂರಿಗೆ ಸಾಕ್ಷ÷್ಯವಾಗಿ ಮನೆಯಲ್ಲಿ ಒಬ್ಬರಿಗೊಬ್ಬರು ಬೈದಾಡಿಕೊಳ್ಳುವ ವೀಡಿಯೋವನ್ನು ನೀಡಿದ್ದಾರೆ.ದೂರು ದಾಖಲಾದ ಬೆನ್ನಲ್ಲೇ ರಂಜಿತ್ ಅವರನ್ನು ಠಾಣೆಗೆ ಕರೆಸಿದ ಪೊಲೀಸರು ಮತ್ತೊಮ್ಮೆ ಗಲಾಟೆ ಮಾಡಿಕೊಳ್ಳಬಾರದು ಎಂದು ಹೇಳಿ ನ್ಯಾಯಾಲಯದಲ್ಲಿ ವಿವಾದ ಬಗೆಹರಿಸಿಕೊಳ್ಳುವಂತೆ ಸೂಚನೆ ನೀಡಿ ಕಳುಹಿಸಿದ್ದಾರೆ.