ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಹುಂಡಿ ಎಣಿಕೆ ಕಾರ್ಯ ನೆರವೇರಿದೆ. ಕಳೆದ ೨೦ ದಿನದಲ್ಲಿ ೩.೭೩ ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.
ಡಿಸೆAಬರ್ ತಿಂಗಳಲ್ಲಿ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡಿದ್ದು, ಕೋಟ್ಯಂತರ ರೂ. ಕಾಣಿಕೆ ಹರಿದು ಬಂದಿದೆ. ಕಳೆದ ೨೦ ದಿನದಲ್ಲಿ ೩,೭೩,೬೬,೫೮೭ ರೂ. ಕಾಣಿಕೆ ಸಂಗ್ರಹವಾಗಿದೆ. ಈ ಪೈಕಿ ಸಂಗ್ರಹವಾದ ಕಾಣಿಕೆಯಲ್ಲಿ ೩,೬೨,೬೯,೨೪೭ ರೂ. ಕರೆನ್ಸಿ ನೋಟುಗಳು ಹಾಗೂ ೧೦,೯೭,೩೪೦ ರೂ. ನಾಣ್ಯಗಳು ಸಂಗ್ರಹವಾಗಿವೆ.
ಇನ್ನೂ ೮೭ ಗ್ರಾಂ ಚಿನ್ನ, ೯೧೦ ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆ ರೂಪದಲ್ಲಿ ನೀಡಿದ್ದಾರೆ. ಮಂತ್ರಾಲಯದ ರಾಯರ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಈ ವೇಳೆ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರಸೇವಕರು ಭಾಗಿಯಾಗಿದ್ದರು.



