ಕಾರ್ತಿಕ್ ಸರಗೂರು ನಿರ್ದೇಶನದ ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ ನಿರ್ಮಿಸುತ್ತಿರುವ ಇಂದು ಎನಗೆ ಗೋವಿಂದ ಚಲನಚಿತ್ರದ ಮುಹೂರ್ತ ಸಮಾರಂಭ ಉಡುಪಿಯ ಅದಮಾರು ಮಠದಲ್ಲಿ ಸೋಮವಾರ ಮಧ್ಯಾಹ್ನ ನಡೆಯಿತು. ಪರ್ಯಾಯ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಚಿತ್ರಕ್ಕೆ ಚಾಲನೆ ನೀಡಿದರು.



