ಕೋಲಾರ: ಲೋಕಸಭಾ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಚುನಾವಣಾ ಕಣ್ಗಾವಲು ತಂಡ, ಕೋಲಾರ ಜಿಲ್ಲೆಯ ರಾಮಸಂದ್ರ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರು ತಡೆದು ತಪಾಸಣೆಗೆ ನಡೆಸಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿಗಳು ಭಾನುವಾರ ರಾತ್ರಿ ಆಗಮಿಸಿದ್ದರು.
ಕೋಲಾರ ನಗರದ ಹೊರಭಾಗದಲ್ಲಿರುವ ಖಾಸಗಿ ಕಲ್ಯಾಣ ಮಂಟಪದಲ್ಲಿ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುತ್ತಿದ್ದ ಸಿದ್ದರಾಮಯ್ಯ ಅವರ ಕಾರನ್ನು ಕೋಲಾರ ಜಿಲ್ಲೆಯ ಗಡಿಯಲ್ಲಿ ಸ್ಥಾಪಿಸಲಾದ ರಾಮಸಂದ್ರ ಚೆಕ್ ಪೋಸ್ಟ್ ಬಳಿ ಪೊಲೀಸರು ತಪಾಸಣೆಗೆ ಒಳಪಡಿಸಿದರು.
ತಪಾಸಣೆಗೆ ಮುಖ್ಯಮಂತ್ರಿ ಸಿದ್ದರಾಮ್ಯ ಹಾಗೂ ಅವರ ಸಿಬ್ಬಂದಿ ಸಹಕಾರ ನೀಡಿದರು. ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಎಸ್. ಸುರೇಶ್ ಅವರು ಜೊತೆಗಿದ್ದರು. ಪ್ರತಿ ವಾಹನವನ್ನು ಸಮಗ್ರವಾಗಿ ತಪಾಸಣೆಗೆ ಒಳಪಡಿಸಬೇಕು ಎಂಬ ಆದೇಶದ ಮೇರೆಗೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದರು. ಬಳಿಕ ಅವರು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಬೆಂಗಳೂರಿಗೆ ತೆರಳಿದರು.