ಕನ್ನಡ ನಾಡು ನುಡಿ, ಸಾಹಿತ್ಯ, ಸಂಸ್ಕೃತಿಯನ್ನು ವಿಶ್ವಕ್ಕೆ ಪಸರಿಸುವ ಸದುದ್ದೇಶದಿಂದ “ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್” ಸಂಸ್ಥೆ ಸಿಂಗಾಪುರದಲ್ಲಿ ಹಮ್ಮಿಕೊಂಡಿರುವ “ಎರಡನೇ ವಿಶ್ವ ಕನ್ನಡ ಹಬ್ಬ”ಕ್ಕೆ ಚಲನಚಿತ್ರ ಅಕಾಡೆಮಿ ಅಧ್ಯಕ್ಷರು ಖ್ಯಾತ ಸಂಗೀತ ನಿರ್ದೇಶಕರು, ನಿರ್ಮಾಪಕರು ಹಾಗೂ ಪ್ರಸಿದ್ಧ ಹಾಸ್ಯ ನಟರಾದ ಸಾಧುಕೋಕಿಲರವರನ್ನು ಭೇಟಿ ಮಾಡಿದ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕಾರ್ಯಕ್ರಮಕ್ಕೆ ಆಗಮಿಸಿ,
ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರಾದ ಶಿವಕುಮಾರ್ ನಾಗರ ನವಿಲೆಯವರು “ಎರಡನೇ ವಿಶ್ವ ಕನ್ನಡ ಹಬ್ಬ”ದ ಸಂಪೂರ್ಣ ರೂಪುರೇಶೆಗಳನ್ನು ವಿವರಿಸಿದರು.ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಂಸ್ಥೆ ಮಹತ್ತರವಾದ ಸಾಧನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಾಧು ಕೋಕಿಲರವರು ,
ಕನ್ನಡ ನಾಡು ನುಡಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡುತ್ತಿರುವ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಂಸ್ಥೆಗೆ ಶುಭಾಶಯಗಳು.ಕಾರ್ಯಕ್ರಮಕ್ಕೆ ನಾನು ಕೂಡ ಆಗಮಿಸಲಿದ್ದೆನೆ ಜೊತೆಗೆ ನಮ್ಮ ಸಹಕಾರ ಸದಾ ನಿಮ್ಮೊಂದಿಗಿದೆ. ಎಲ್ಲರೂ ಒಟ್ಟಾಗಿ ಕಾರ್ಯಕ್ರಮ ಯಶಸ್ವಿಗೊಳಿಸೋಣ ಎಂದರು. ಈ ಸಂದರ್ಭದಲ್ಲಿ ಗಾಯಕ ಮೋಹನ್ ಕೃಷ್ಣ, ದಿನೇಶ್ ಜೋಶಿ, ಭುವನ್, ಕಾವ್ಯ. ಆರ್ ಸೇರಿದಂತೆ ಇನ್ನೂ ಹಲವರು ಜೊತೆಗಿದ್ದರು.