ಕೆ.ಆರ್.ಪೇಟೆ: ತಾಲೂಕಿನ ಕಿಕ್ಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಿಕ್ಕೇರಿ ರಾಜೇಶ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಹಿಂದಿನ ಅಧ್ಯಕ್ಷೆ ತಾಯಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಕಿಕ್ಕೇರಿ ಕೆ.ಆರ್ ರಾಜೇಶ್ ಹೊರತುಪಡಿಸಿ ಉಳಿದ ಯಾವ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ನೂತನ ಅಧ್ಯಕ್ಷರಾಗಿ ಕೆ.ಆರ್ ರಾಜೇಶ್ ಅವಿರೋಧವಾಗಿ ಆಯ್ಕೆಯಾಗಿದ್ದರೆ ಎಂದು ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ತಹಶೀಲ್ದಾರ್ ನಿಸರ್ಗಪ್ರಿಯ ಘೋಷಿಸಿದರು.
ನೂತನ ಅಧ್ಯಕ್ಷ ಕೆ.ಆರ್ ರಾಜೇಶ್ ಮಾತನಾಡಿ, ನನ್ನನು ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಗ್ರಾ.ಪಂ ವ್ಯಾಪ್ತಿಗೆ ಬರುವ ಪ್ರತಿ ಹಳ್ಳಿಯ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸಿ ಪಕ್ಷಾತೀತ ನೆಲೆಯಲ್ಲಿ ಅಭೀವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳುವ ಮೂಲಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಭರವಸೆ ನೀಡಿದರು.
ಬಳಿಕ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಎಸ್ ಪ್ರಭಾಕರ್ ಸದಸ್ಯರು ಮತ್ತು ಅಧ್ಯಕ್ಷರು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಿದರೆ ಸಾಕಷ್ಟು ಅಭಿವೃದ್ಧಿ ಸಾಧಿಸಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ರೂಪಿಸಬಹುದು.ಅಭಿವೃದ್ಧಿ ವಿಚಾರಗಳಿಗೆ ರಾಜಕೀಯವನ್ನು ಬೆರೆಸಬಾರದು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಾ.ಪಂ ಮಾಜಿ ಉಪಾಧ್ಯಕ್ಷ ವಡ್ಡರಹಳ್ಳಿ ರವಿ ಕುಮಾರ್, ತಾ.ಪಂ ಮಾಜಿ ಸದಸ್ಯ ಶಾರದ ಕೃಷ್ಣಗೌಡ,ಗ್ರಾ.ಪಂ ಉಪಾಧ್ಯಕ್ಷೆ ಸರಸ್ವತಿ ಗೋವಿಂದರಾಜು , ಸದಸ್ಯರಾದ ಎಸ್ ಕೆ ಬಾಲಕೃಷ್ಣ, ತಾಯಮ್ಮ ದೇವರಾಜು,ಕೆ ಜಿ ಪುಟ್ಟರಾಜು,ಎಂ ವಿ ರೇಣುಕಮ್ಮ , ಭಾರತಿ ಪ್ರಕಾಶ್, ಕೆ. ಬಿ ಚಂದ್ರಶೇಖರ, ಜ್ಯೋತಿ ದಯಾನಂದ್, ಕೃಷ್ಣಪ್ಪ,ಮುಖಂಡರಾದ ನಾಗಣ್ಣ, ಶಂಕರಲಿಂಗೇಗೌಡ, ಕುಮಾರ್, ವಿಷಕಂಠ, ಸೇರಿದಂತೆ ಉಪಸ್ಥಿತರಿದ್ದರು.