ಬೆಂಗಳೂರು: ಆದಾಯ ಮೀರಿ ನೂರಾರು ಪಟ್ಟು ಅಕ್ರಮ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು 12ಕ್ಕೂ ಹೆಚ್ಚು ಮಂದಿ ಸರ್ಕಾರಿ ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳ ಮೇಲೆ ಭಾರಿ ಪ್ರಮಾಣದ ದಾಳಿ ನಡೆಸಿದ್ದಾರೆ.ರಾಜ್ಯದ 60 ಕಡೆ ಏಕಕಾಲಕ್ಕೆ 13 ಮಂದಿ ಎಸ್ಪಿಗಳು, 12 ಮಂದಿ ಡಿವೈಎಸ್ಪಿಗಳು, 25 ಪಿಐಗಳು ಸೇರಿದಂತೆ 130 ಅಧಿಕಾರಿಗಳು ಲೋಕಾಯುಕ್ತ ದಾಳಿಯಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಮಹಾನಗರ ಪಾಲಿಕೆ ಚೀಫ್ ಎಂಜಿನಿಯರ್ ರಂಗನಾಥ್ ಎಸ್.ಪಿ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬ್ಯಾಟರಾಯನಪುರ- ಯಲಹಂಕ ವಲಯದ ಅಧಿಕಾರಿಯಾಗಿರುವ ರಂಗನಾಥ್ಗೆ ಸೇರಿದ ಐದು ಸ್ಥಳಗಳಲ್ಲಿ ದಾಳಿ ನಡೆದಿದೆ.ರಾಜ್ಯದ ಪ್ರಮುಖ ಹುದ್ದೆಗಳಲ್ಲಿರುವ 12ಕ್ಕೂ ಅಧಿಕ ಅಧಿಕಾರಿಗಳಿಗೆ ಸೇರಿದ ಮನೆಗಳು, ಐಷಾರಾಮಿ ಫ್ಲ್ಯಾಟ್ಗಳು ಹಾಗೂ ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ದಾಳಿಗೊಳಗಾದ ಅಧಿಕಾರಿಗಳ ವಿವರ: ರಂಗನಾಥ್ ಎಸ್.ಪಿರವರಿಗೆ ಬಿಬಿಎಂಪಿಯ ಯಲಹಂಕ ಹಾಗೂ ಬ್ಯಾಟರಾಯನಪುರ ವಿಭಾಗದ ಚೀಫ್ ಇಂಜಿನಿಯರ್ಗೆ ಸಂಬಂಧಿಸಿದ ಬೆಂಗಳೂರಿನ 5 ಸ್ಥಳಗಳು.ರೂಪ – ಡೆಪ್ಯುಟಿ ಕಮಿಷನರ್, ಅಬಕಾರಿ ಇಲಾಖೆರವರಿಗೆ ಸಂಬಂಧಿತ ಉಡುಪಿಯ 5 ಸ್ಥಳಗಳು.ಪ್ರಕಾಶ್ – ಜ್ಯೂನಿಯರ್ ಇಂಜಿನಿಯರ್ರವರಿಗೆ ಸಂಬಂಧಿಸಿದ ಕಾರವಾರ – ಉ.ಕ ಜಿಲ್ಲೆಯ 4 ಸ್ಥಳಗಳು.
ಫಯಾಜ್ ಅಹಮದ್ – ಅಸಿಸ್ಟೆಂಟ್ ಇಂಜಿನಿಯರ್ರವರಿಗೆ ಸಂಬಂಧಿಸಿದ ಮೈಸೂರಿನ 12 ಸ್ಥಳಗಳು.ಜಯಣ್ಣ ಬಿ.ವಿ. ಮುಖ್ಯ ಕಾರ್ಯಕಾರಿ ಅಭಿಯಂತರ, ಕೊಡಗು. ಮಹೇಶ್ ಚಂದ್ರಯ್ಯ ಹೀರೆಮಠ್- ಅರಣ್ಯ ವಲಯದ ಅಧಿಕಾರಿ- ಧಾರವಾಡದ 6 ಸ್ಥಳಗಳು. ಶಿವಕುಮಾರಸ್ವಾಮಿ- ಎಕ್ಸಿಕ್ಯೂಟಿವ್ ಇಂಜಿನಿಯರ್ ಬೀದರ್ನ 4 ಸ್ಥಳಗಳು. ನಾಗರಾಜಪ್ಪ- ಅಸ್ಟಿಸೆಂಟ್ ಡೈರೆಕ್ಟರ್ ಕೋಲಾರದ ಐದು ಕಡೆಗಳಲ್ಲಿ.
ಷಣ್ಮುಗಪ್ಪ- ಎಆರ್ ಟಿಓ ಜಮಖಂಡಿ, ಬಾಗಲಕೋಟೆಯ ನಾಲ್ಕು ಕಡೆಗಳಲ್ಲಿ. ಸದಾಶಿವಯ್ಯ-ಅಸ್ಟಿಸೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಚಿಕ್ಕಬಳ್ಳಾಪುರದ 6 ಕಡೆಗಳಲ್ಲಿ ದಾಳಿ ಕೃಷ್ಣಗೌಡ- ದ್ವೀತಿಯ ದರ್ಜೆ ಸಹಾಯಕ ಲೆಕ್ಕಾಧಿಕಾರಿ, ಆಗಸನಪುರ ಗ್ರಾಮ ಪಂಚಾಯಿತಿ ಮಳವಳ್ಳಿ, ಮಂಡ್ಯ ನಾಲ್ಕು ಕಡೆಗಳಲ್ಲಿ ದಾಳಿ.
ಸದಾಶಿವ ಜಯಪ್ಪ, ಸೆಕ್ರೆಟರಿ ಪಿಡಿಓ, ನಿಡಗುಂದಿ ಗ್ರಾಮ ಬೆಳಗಾವಿಯ 3 ಕಡೆಗಳಲ್ಲಿ ದಾಳಿ.