ಬೆಂಗಳೂರು : ಬೆಂಗಳೂರಿನಲ್ಲಿ ಲವ್ ಜಿಹಾದ ಪ್ರಕರಣದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಮೃತಹಳ್ಳಿ ಠಾಣೆ ಪೋಲೀಸರು
ಆರೋಪಿ ಮೊಹಮ್ಮದ್ ಇಶಾಕ್ ನನ್ನ ಅರೆಸ್ಟ್ ಮಾಡಿದ್ದಾರೆ. ಮತಾಂತರಕ್ಕೆ ಒಪ್ಪದಿದ್ದಕ್ಕೆ ಪ್ರೀತಿಸಿದ ಯುವತಿಗೆ ಮಹಮ್ಮದ್ ಇಶಾಕ್ ಕೈಕೊಟ್ಟಿದ್ದಾನೆ.
ಪ್ರಕರಣ ಅಮೃತ ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಬರುವ ಕಾರಣ ಹಿನ್ನೆಲೆಯಲ್ಲಿ ಪ್ರಕರಣ ಅಮೃತಹಳ್ಳಿ ಠಾಣೆಗೆ ವರ್ಗಾವಣೆ ಆಗಿತ್ತು.
೨೦೨೪ರ ಅಕ್ಟೋಬರ್ ೧೭ರಂದು ಯುವತಿಗೆ ಮೊಹಮ್ಮದ್ ಇಶಾಕ್ನ ಪರಿಚಯವಾಗಿತ್ತು. ಈ ಪರಿಚಯ ಸ್ನೇಹ ಮತ್ತು ಸ್ನೇಹ ಪ್ರೀತಿಯಾಗಿ ಬದಲಾಗಲು ಹೆಚ್ಚು ಸಮಯ ಬೇಕಿರಲಿಲ್ಲ. ೨೦೨೪ರ ಅಕ್ಟೋಬರ್ ೩೦ ರಂದು ಧಣಿಸಂದ್ರದ ಮಾಲ್ ನಲ್ಲಿ ಇಬ್ಬರು ಭೇಟಿಯಾಗಿದ್ದರು. ನಂತರ ಯುವತಿ ಜೊತೆ ಇಶಾಕ್ ಸಲುಗೆ ಬೆಳೆಸಿಕೊಂಡಿದ್ದನು. ಮದುವೆ ಸಂಬAಧ ಮನೆಯವರೊಂದಿಗೆ ಮಾತನಾಡೋದಾಗಿ ಇಶಾಕ್ ನಂಬಿಸಿದ್ದನು. ಒAದು ದಿನ ದಾಸರಹಳ್ಳಿ ಖಾಸಗಿ ಹೋಟೆಲ್ನಲ್ಲಿ ರೂಮ್ ಬುಕ್ ಮಾಡಿದ್ದ ಇಶಾಕ್, ಯುವತಿಯನ್ನು ಕರೆಸಿಕೊಂಡಿದ್ದನು. ಈ ವೇಳೆ ಮದುವೆಯ ಭರವಸೆ ನೀಡಿ ಆಕೆಯೊಂದಿಗೆ
ಸAಪರ್ಕ ಬೆಳೆಸಿದ್ದಾನೆ. ನಂತರ ಹಲವು ಬಾರಿ ಸಂಪರ್ಕ ಬೆಳೆಸಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೆಲವು ದಿನಗಳ ನಂತರ
ಬೇರೆ ಯುವತಿಯರ ಜೊತೆ ಇಶಾಕ್ ಸಂಪರ್ಕ ಹೊAದಿರುವ ವಿಷಯ ಗೊತ್ತಾಗಿದೆ. ೨೦೨೫ರ ಸೆ.೧೪ರಂದು ಮುಸ್ಲಿಂ ಯುವತಿ ಜೊತೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿರುವ ವಿಷಯ ತಿಳಿದು ಪ್ರಶ್ನೆ ಮಾಡಿದಾಗ, ನಿನ್ನ ದಾರಿಯನ್ನು ನೀನು ನೋಡಿಕೋ ಎಂದು ಇಶಾಕ್ ಹೇಳಿದ್ದಾನೆ. ಇಷ್ಟು ಮಾತ್ರವಲ್ಲ ಪದೇ ಪದೇ
ಕರೆ ಮಾಡಿದ್ರೆ ಕೊ*ಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಒಂದು ದಿನ ಇಶಾಕ್ನ ಸೋದರ ಮತ್ತು ಬಾವ
ಬಂದು ನನ್ನೊಂದಿಗೆ ಮಾತನಾಡಿ ಮತಾಂತರ ಆಗುವಂತೆ ಹೇಳಿದ್ದರು. ಮತಾಂತರವಾಗಲು ೪೦ ದಿನ ಸಮಯ ಇರುತ್ತೆ. ನಮಾಜ್ ಮಾಡಲು ಕಲಿತುಕೊಳ್ಳಬೇಕು. ಮೊದಲು ಮತಾಂತರ ಆಗು, ಆನಂತರ ಮದುವೆ ಬಗ್ಗೆ ಮಾತನಾಡೋಣ ಎಂದಿದ್ದರು ಅಂತ ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ.



