ಬೆಂಗಳೂರು: ಅನಾರೋಗ್ಯದಿಂದ ರಿನಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಅವರಿಗೆ ಪೇಸ್ಮೇಕರ್ ಅನ್ನು ಯಶಸ್ವಿಯಗಿ ಅಳವಡಿಸಲಾಗಿದೆ. ಶೀಘ್ರದಲ್ಲೇ ಚೇತರಿಸಿಕೊಂಡ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ ಖರ್ಗೆ ಆರೋಗ್ಯವಾಗಿದ್ದು, ಮನೆಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಶೀಘ್ರದಲ್ಲೇ ಅವರು ಕರ್ತವ್ಯಕ್ಕೆ ಮರಳಲಿದ್ದಾರೆ. ಖರ್ಗೆ ಅವರ ಆರೋಗ್ಯದ ಕುರಿತು ಕಾಂಗ್ರೆಸ್ ಮಾಹಿತಿ ಹಂಚಿಕೊAಡಿದೆ.
ಖರ್ಗೆ ಅವರು ಚೆನ್ನಾಗಿದ್ದಾರೆ. ನಿಮ್ಮೆಲ್ಲರಶುಭ ಹಾರೈಕೆ ಮತ್ತು ಬೆಂಬಲಕ್ಕೆ ಧನ್ಯವಾದಗಳು. ಶೀಘ್ರವೇ ತಮ್ಮ ಚಟುವಟಿಕೆಗಳನ್ನು ಪುನಾರಂಭಿಸುವ ನಿರೀಕ್ಷೆಯಿದೆ ಎಂದು ಕಾAಗ್ರೆಸ್ ಪ್ರಕಟಣೆ ತಿಳಿಸಿದೆ. `ನನ್ನ ಆರೋಗ್ಯಕ್ಕಾಗಿ ಶುಭಾಶಯಗಳ ಮಹಾಪೂರವನ್ನೇ ಹಾರೈಸಿದ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಮತ್ತು
ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ನಾನು ಶೀಘ್ರದಲ್ಲೇ ನನ್ನ ಕೆಲಸ ಕಾರ್ಯಗಳನ್ನು ಪ್ರಾರಂಭಿಸಲು ಉದ್ದೇಶಿಸಿದ್ದೇನೆ’ ಎಂದು ಮಲ್ಲಿಕಾರ್ಜುನ ಖರ್ಗೆ ಟ್ವೀಟ್.