ಪೀಣ್ಯ ದಾಸರಹಳ್ಳಿ: ಸಮೀಪದ ಯಲಹಂಕ ವಿಧಾನಸಭಾ ಕ್ಷೇತ್ರ ದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ಹಾಗೂ ರಾಜ್ಯ ಸಮಿತಿ ಮತ್ತು ಜಿಲ್ಲಾ ಸಮಿತಿ ಆದೇಶದ ಮೇರೆಗೆ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಯಲಹಂಕ ವಿಧಾನ ಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್, ಉಪಾಧ್ಯಕ್ಷರಾದ ಮಲ್ಲಿಕಾರ್ಜುನ, ಪ್ರದಾನ ಕಾರ್ಯದರ್ಶಿ ಮಂಜುನಾಥ್, ಕಾರ್ಯದರ್ಶಿಯಾದ ನಾಗಭೂಷಣ್, ಈರಣ್ಣ, ಜಯರಾಮಣ್ಣ, ಸಂಘಟನೆ ಕಾರ್ಯದರ್ಶಿಯಾಗಿ ವಿಶ್ವ, ಸುರೇಶಗೌಡ, ಶೇಷಾಚಲ, ಸಂಚಾಲಕರಾದ ಕುಮಾರಸ್ವಾಮಿ ಹಾಗೂ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಭಿನಂದನೆಗಳು ಸಲ್ಲಿಸಿದರು.
ಬೆಂಗಳೂರು ಉಸ್ತುವಾರಿಯಾದ ಮಂಜುನಾಥ್, ಉತ್ತರ ಜಿಲ್ಲಾ ಘಟಕ ಅಧ್ಯಕ್ಷರಾದ ಶ್ರೀಕುಮಾರ್, ಯಲಹಂಕ ಉಸ್ತುವಾರಿಯಾದ ನರೇಂದ್ರ ಬಾಬು, ಕಾರ್ಯದರ್ಶಿಯಾದ ರಂಗರಾಜ್, ಪೀಣ್ಯ ದಾಸರಹಳ್ಳಿ ಕ್ಷೇತ್ರದ ಅಧ್ಯಕ್ಷರಾದ ತಿಪ್ಪೇಶ್, ಕಾರ್ಯದರ್ಶಿಯಾದ ಮುದ್ದುರಾಜು, ಅಶೋಕ್ ಮುಂತಾದವರು ಉಪಸ್ಥಿತರಿದ್ದರು.