ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಬೇಸಿಗೆಯಲ್ಲಿ ಎದುರಾಗುವ ನೀರಿನ ಸಮಸ್ಯೆ ನೀಗಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ.
ಇಂದು ಈ ಸಂಬಂಧ ಬೆಂಗಳೂರು ನಗರಾಭಿವೃದ್ಧಿಯ ಅಧಿಕಾರಿಗಳ ಜತೆ ಬಿಬಿಎಂಪಿ ಮಹತ್ವದ ಸಭೆ ನಡೆಸಿದೆಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ನೀರಿನ ಸಮಸ್ಯೆ ಇರುವ ಕಡೆ ಕೊಳವೆ ಬಾವಿಗಳನ್ನು ಕೊರೆಸಿ ನೀರಿನ ಸಮಸ್ಯೆ ಇಲ್ಲದಂತೆ ಮಾಡಲು ಕ್ರಮ ಜರುಗಿಸಲಾಗುತ್ತದೆ.
ಬಿಬಿಎಂಪಿ, ಬಿಡಬ್ಲ್ಯೂ ಎಸ್ಎಸ್ಬಿ, ಬಿಡಿಎ ಸಮನ್ವಯತೆಯಿಂದ ಕೆಲಸ ಮಾಡುತ್ತೇವೆ. ನಾವು ಪ್ರತಿ ಕ್ಷೇತ್ರಕ್ಕೂ ನೀರಿನ ಸಮಸ್ಯೆ ನೀಗಲು 10 ಕೋಟಿ. ರೂ.ಗಳನ್ನು ಬಿಡಬ್ಲ್ಯೂ ಎಸ್ಎಸ್ಬಿಗೆ ಕೊಡುತ್ತೇವೆ. ಬಿಬಿಎಂಪಿ ವ್ಯಾಪ್ತಿಗೆ ಸೇರಿರುವ 110 ಹಳ್ಳಿಗಳಿಗೆ 40 ಸಾವಿರ ಸಂಪರ್ಕ ನೀಡಲಾಗಿದೆ ಎಂದು ವಿವರಿಸಿರುವ ಆಯುಕ್ತರು ಯಾವುದೇ ಕಾರಣಕ್ಕೂ ನೀರಿನ ಸಮಸ್ಯೆ ತೀವ್ರವಾಗಿ ಎದುರಾಗದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದಿದ್ದಾರೆ.
ಸಾಮಾನ್ಯ ಜನರು ವಾಸಿಸುವ ಪ್ರದೇಶಗಳಿಗೆ ಟ್ಯಾಂಕರ್ಗಳ ಮೂಲಕ ಉಚಿತವಾಗಿ ನೀರು ಪೂರೈಸಲಾಗುವುದು. ಟ್ಯಾಂಕರ್ಗಳ ನೀರಿನ ದರವನ್ನು ಕಡಿಮೆ ಮಾಡಲಾಗುವುದು ಎಂದು ಸಹ ಅವರು ಹೇಳಿದ್ದಾರೆ.