ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ಭಾರೀ ಸುದ್ದಿಯಾಗಿದ್ದು ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ. ಅಧಿವೇಶನದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ತೀವ್ರ ಚರ್ಚೆ ಗಳು ನಡೆಯುತ್ತಿದೆ.
ವಿಪಕ್ಷ ನಾಯಕರು ರಾಜ್ಯ ಸರ್ಕಾರ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಸರ್ಕಾರ ಗ್ಯಾರಂಟಿ ಹೆಸರಲ್ಲಿ ಜನರಿಗೆ ಮೋಸಮಾಡುತ್ತಿದೆ. ಫೆಬ್ರವರಿ, ಮಾರ್ಚ್ ತಿಂಗಳ ಹಣ ನೀಡಿದೇ 5 ಸಾವಿರ ಕೊಟಿ ಮೋಸ ಆಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ವಿಪಕ್ಷ ನಾಯಕ ಆರ್ ಅಶೋಕ್ ಸರ್ಕಾರದ ವಿರುದ್ಧ ತೀವ್ರ ಆರೋಪ ಮಾಡಿದ್ದು, ಈ ಸರ್ಕಾರ ಗ್ಯಾರಂಟಿ ಹೆಸರಲ್ಲಿ ಜನರಿಗೆ ಮೋಸ ಮಾಡುತ್ತಿದೆ. ಕಳೆದ ಬಜೆಟ್ನಲ್ಲಿ ಕೊಡಬೇಕಿದ್ದ 5 ಸಾವಿರ ಕೋಟಿ ಹಣ ಕೊಡದೇ ಉಳಿಸಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯ ಸರ್ಕಾರ ಗ್ಯಾರಂಟಿಗಳ ಮೂಲಕ ಕೋಟಿ ಕೋಟಿ ಮೋಸ ಮಾಡುತ್ತಿದೆ. ಕಳೆದ ಬಜೆಟ್ನಲ್ಲಿ ಕೊಡಬೇಕಿದ್ದ 5 ಸಾವಿರ ಕೋಟಿ ಹಣ ಕೊಡದೇ ಉಳಿಸಿಕೊಂಡಿದ್ದಾರೆ. ಶಕ್ತಿ ಯೋಜನೆಯಲ್ಲಿಯೂ ಹಣ ಉಳಿಸಿಕೊಂಡಿದ್ದಾರೆ. ಸರ್ಕಾರ ಪಾಪರ್ ಆಗಿದ್ದು, ಸಂಬಳ ಕೊಡೋದಕ್ಕೂ ಹಣ ಇಲ್ಲ. ಕಾಂಗ್ರೆಸ್ ಮಾನ ಮರ್ಯಾದೆ ಹರಾಜು ಆಗಿದೆ. ಮತ್ತೆ ಸ್ಟಾಂಪ್ ಡ್ಯೂಟಿ ಹೆಚ್ಚಿಸುತ್ತಿದ್ದಾರೆ. ಇದು ತುಘಲಕ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.



