ಮುಳಬಾಗಿಲು: ನಮ್ಮ ನಡೆ ಗ್ರಾಮದ ಕಡೆ ಎಂಬ ವಿನೂತನ ಕಾರ್ಯಕ್ರಮವನ್ನು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ನಡೆಸುವ ಮೂಲಕ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾಗುತ್ತದೆ ಎಂದು ಶಾಸಕ ಸಮೃದ್ಧಿ ವಿ ಮಂಜುನಾಥ್ ತಿಳಿಸಿದರು.ತಾಲ್ಲೂಕಿನ ತಿಮ್ಮರಾವುತನಹಳ್ಳಿ ಗ್ರಾಪಂ ಮಟ್ಟದ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ. ಸರ್ಕಾರಿ ಯೋಜನೆಗಳನ್ನು ಫಲಾನುಭವಿಗೆ ತಲುಪಿಸುವ ಹಾಗೂ ಗ್ರಾಮಗಳಲ್ಲಿನ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ. ತಾಲ್ಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ತಿಳಿಸಿದರು.ಬಹುತೇಕ ಗ್ರಾಮಗಳಿಂದ ವೃದ್ಧರು. ಮಹಿಳೆಯರು ಸೇರಿದಂತೆ ವಿಶೇಷ ಚೇತನರು. ರೈತರು ಹಲವು ಕುಂದು ಕೊರತೆಗಳ ಬಗ್ಗೆ ನನ್ನ ಬಳಿ ಬಂದು ಮನವಿ ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಗ್ರಾಪಂ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಿ ಅಲ್ಲೇ ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ತೀರ್ಮಾನ ತೆಗೆದುಕೊಂಡಿದ್ದೇನೆ ಎಂದು ತಿಳಿಸಿದರು.ಗ್ರಾಪುಂ ಕಚೇರಿಗಳಲ್ಲಿ ಸಾರ್ವಜನಿಕರಿಗೆ ತ್ವರಿತವಾಗಿ ಕೆಲಸಗಳನ್ನು ಮಾಡಿಕೊಡಬೇಕು. ನಾನ ಇಲಾಖೆ ಅಧಿಕಾರಿಗಳು ಸಾರ್ವಜನಿಕ ಕೆಲಸಗಳನ್ನು ಮಾಡಿಕೊಡಬೇಕು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ತಿಳಿಸಿದರು.
ಇಂದು ನಡೆದ ಸಭೆಯಲ್ಲಿ 59 ಅರ್ಜಿಗಳು ಬಂದಿದ್ದು ಇವುಗಳಲ್ಲಿ ಒಂಬತ್ತು ಅರ್ಜಿಗಳು ಸ್ಥಳದಲ್ಲೇ ಪರಿಹಾರ ನೀಡಲಾಯಿತು . ಮಿಕ್ಕ 50 ಅರ್ಜಿಗಳಿಗೆ 15 ದಿನಗಳ ಒಳಗೆ ಪರಿಹಾರ ಕಲಿಸುವಂತೆ ಅಧಿಕಾರಿಗಳಿಗೆ ಶಾಸಕರು ಕಟ್ಟುನಿಟ್ಟಿನ ಆದೇಶ ಮಾಡಿದರು. ಕಂದಾಯ. ವಸತಿ. ಸಾರಿಗೆ. ಪಡಿತರ ಚೀಟಿ. ಗ್ರಾಫಂ ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ಶಾಸ್ತ್ರದಲ್ಲಿ ಕೆಲವರು ಮೌಖಿಕವಾಗಿ ತಿಳಿಸಿದರು. ಇನ್ನು ಕೆಲವರು ಅರ್ಜಿ ನೀಡಿ ಬೇಗ ಪರಿಹಾರಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದರು.
ಎಸ್ಸಿ ಎಸ್ಟಿ ಅನುದಾನದಲ್ಲಿ ಶವ ಸಂಸ್ಕಾರಕ್ಕೆ 9 ಫಲಾನುಭವಿಗಳಿಗೆ 5 ಸಾವಿರ ರೂ ಚೆಕ್ಕನ್ನು ವಿತರಣೆ ಮಾಡಿದರು. ಇನ್ನು ಕೆಲವರಿಗೆ ವೈದಿಕೀಯ ಚಿಕಿತ್ಸೆಗಾಗಿ ಸಹಾಯಧನವನ್ನು ಚೆಕ್ಕನ್ನು ವಿತರಣೆ ಮಾಡಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ನಲ್ಲೂರು ರಘುಪತಿ ರೆಡ್ಡಿ ಮಾತನಾಡಿ. ಡಿಸಿಸಿ ಬ್ಯಾಂಕ್ ನಿಂದ ಮಹಿಳಾ ಸಂಘಗಳ ಸದಸ್ಯರು ಸಾಲ ಪಡೆದು ಹಾಗೂ ರೈತರ ರೈತರು ಆದಷ್ಟು ಬೇಗ ಮರುಪಾವತಿ ಮಾಡುವ ಮೂಲಕ ಬ್ಯಾಂಕ್ ರಚನೆ ಮಾಡಬೇಕೆಂದು ಮನವಿ ಮಾಡಿದರು.
ಗ್ರಾಫಂ ಆಡಳಿತ ಅಧಿಕಾರಿ ಎಂ ರಮ್ಯ ಪ್ರಸ್ತಾವಿಕ ಭಾಷಣ ಮಾಡಿದರು ಮಾತನಾಡಿದರು.
ತಾಹಸೀಲ್ದಾರ್ ವಿಗೀತಾ. ತಾಪಂ ಇಒ ಎನ್ ವಿ ಬಾಬು. ನರೇಗಾ ಸಹಾಯಕ ನಿರ್ದೇಶಕ ಆರ್ ರವಿಚಂದ್ರ. ಮುಖಂಡರಾದ ಸುಬ್ಬಾರೆಡ್ಡಿ. ಜಯರಾಮರೆಡ್ಡಿ. ರಾಜಾ ರೆಡ್ಡಿ. ಮೋಹನ್ ರೆಡ್ಡಿ. ಚಲಪತಿ ಜಗನ್ನಾಥ್ ಶೆಟ್ಟಿ. ಮುನಿರತ್ನಪ್ಪ ಸೇರಿದಂತೆ ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ನಮ್ಮ ನಡೆ ಗ್ರಾಮದ ಕಡೆ ಎಂಬ ವಿನೂತನ ಕಾರ್ಯಕ್ರಮದಲ್ಲಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ: ಶಾಸಕ ಸಮೃದ್ಧಿ ವಿ ಮಂಜುನಾಥ್



