ವಿಜಯಪುರ: ನಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯೊಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜೊತೆಗಿರುತ್ತದೆ ಎಂದು ನಿವೃತ್ತ ಶಿಕ್ಷಕಿ ಸುನೀತಾಕಟ್ಟಿ ಹೇಳಿದರು. ಪಟ್ಟಣದ ದೇವನಹಳ್ಳಿ ರಸ್ತೆಯಲ್ಲಿರುವ ಆರ್.ಕೆ.ಫಂಕ್ಷನ್ ಹಾಲ್ ನಲ್ಲಿ, ಭಾನುವಾರ ಸರಕಾರಿ ಪದವಿ ಪೂರ್ವ ಕಾಲೇಜಿನ ೧೯೯೫-೯೬ ನೇ ಸಾಲಿನ ಎಸ್.ಎಸ್.ಎಲ್.ಸಿ. ಡಿ.ವಿಭಾಗದ ಹಳೇಯ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜೀವನದಲ್ಲಿ ಗುರಿ, ಛಲ, ಗುರುವಿನ ಆಶೀರ್ವಾದ ಇದ್ದರೆ ಮಾತ್ರವೇ ವಿದ್ಯೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ. ವಿದ್ಯೆ ಕಲಿತ ವಿದ್ಯಾರ್ಥಿಗಳು ಪ್ರಾಯೋಜಕರಾದಾಗ ಜೀವನದಲ್ಲಿ ಅತ್ಯಮೂಲ್ಯವಾದ ಉಡುಗೊರೆ ಕೊಟ್ಟಂತಾಗುತ್ತದೆ. ವಿದ್ಯಾರ್ಥಿಗಳು ಎಷ್ಟೇ ದೊಡ್ಡವರಾದರೂ ಗುರುಗಳಿಗೆ ವಿದ್ಯಾರ್ಥಿಗಳೇ, ನಮ್ಮಿಬ್ಬರ ನಡುವೆ ಸಂಬAಧ ಕೊನೆಯವರೆಗೂ ಉಳಿಯುತ್ತದೆ. ತಂದೆ, ತಾಯಿಗಳನ್ನು ಪ್ರೀತಿಸಿ, ಅವರನ್ನು ಗೌರವಿಸುವುದನ್ನು ರೂಢಿಸಿಕೊಳ್ಳಿ ಎಂದರು.
ಹಿರಿಯ ನಿವೃತ್ತ ಶಿಕ್ಷಕ ಕೃಷ್ಣಪ್ರಸಾದ್ ಮಾತನಾಡಿ, ಸಮಾಜದಲ್ಲಿ ಏಳಿಗೆಯನ್ನು ಸಾಧಿಸಬೇಕು ಎಂದರೇ ವಿದ್ಯೆ ಒಂದೇ ಅವರನ್ನು ಕೈ ಹಿಡಿಯುತ್ತಾ ಬರುತ್ತಿರುವುದು. ನನ್ನ ಶಿಕ್ಷಕ ವೃತ್ತಿಯನ್ನು ವಿಜಯಪುರದಲ್ಲಿ ಆರಂಭಿಸಿದ ದಿನದಿಂದ ಇಲ್ಲಿಯವರೆವಿಗೂ ನಾನು ಕಂಡAತೆ ಇಲ್ಲಿ ವಿದ್ಯಾರ್ಥಿಗಳು ಹಠವಾದಿಗಳು. ವಿದ್ಯೆ ಕಲಿತು ತಾವು ಏನಾದರೂ ಸಾಧಿಸಲೇಬೇಕು ಎಂಬ ಛಲ ಹೊಂದಿರುವ ವ್ಯಕ್ತಿಗಳಾಗಿರುವ ಕಾರಣದಿಂದಲೇ ಇಲ್ಲಿ ವ್ಯಾಸಂಗ ಮಾಡಿರುವ ಅದೆಷ್ಟೋ ಮಂದಿ ಇಂದು ದೇಶದ ನಾನಾ ಭಾಗಗಳಲ್ಲಿ ಉನ್ನತ ಸ್ಥಾನಮಾನಗಳನ್ನು ಅಲಂಕರಿಸಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
ನಾರಾಯಣಪುರ ಪ್ರೌಢಶಾಲೆಯ ಮುಖ್ಯಶಿಕ್ಷಕ ಪಿ.ಎಂ.ಕೊಟ್ರೇಶ್ ಮಾತನಾಡಿ, ವಿಜ್ಞಾನ ತಂತ್ರಜ್ಞಾನ ಮುಂದುವರಿದ ಈ ಕಾಲದಲ್ಲಿ ವಿಶ್ವವೇ ಒಂದು ಗ್ರಾಮವಂತಾಗಿದೆ. ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಹುಟ್ಟಿದ ಊರು ಬಿಟ್ಟು ಬೇರೆಲ್ಲೋ ನೆಲೆಸಿದವರು ತಮ್ಮ ದಿನನಿತ್ಯದ ಒತ್ತಡ ಜೀವನದಲ್ಲಿ ಹುಟ್ಟಿದ ಊರು, ಹೆತ್ತವರು, ಅಕ್ಷರ ಕಲಿಸಿದ ಗುರುಗಳನ್ನು ನೆನೆಸಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಿರಿಯ ವಿದ್ಯಾರ್ಥಿಗಳೆಲ್ಲರನ್ನೂ ಒಟ್ಟುಗೂಡಿಸುವ, ತಮ್ಮ ಹಳೆಯ ದಿನಗಳನ್ನು ಮೆಲಕು ಹಾಕುವಂತಹ ಸುಂದರ ಕ್ಷಣಗಳಿಗೆ ಸಾಕ್ಷಿಯಾದ ಇಂತಹ ಕಾರ್ಯಕ್ರಮ ಇದೀಗ ಅಗತ್ಯವಿದೆ. ಆ ಮೂಲಕ ಶಾಲೆ ಹಾಗೂ ಗ್ರಾಮದ ಅಭಿವೃದ್ಧಿಯನ್ನು ಸಾಧಿಸಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಹಿರಿಯ ವಿದ್ಯಾರ್ಥಿಗಳು, ತಮಗೆ ವಿದ್ಯೆ ಕಲಿಸಿದ ಗುರುಗಳ ಪಾದಗಳು ಮುಟ್ಟಿ ನಮಸ್ಕರಿಸುವ ಮೂಲಕ ಅವರಿಂದ ಆಶೀರ್ವಾದ ಪಡೆದುಕೊಂಡರು. ತಮ್ಮ ಗುರುಗಳನ್ನು ಸನ್ಮಾನಿಸಿ ಗೌರವಿಸಿದರು. ನಿವೃತ್ತ ಶಿಕ್ಷಕರಾದ ಚಂದ್ರಿಕಾ, ರುಕ್ಮೀಣಿಬಾಯಿ, ಗುಂಡೂರಾವ್, ಹಾಜರಿದ್ದರು.