ಅಯೋಧ್ಯೆಯ ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ, ಇಂದು ಕುಟುಂಬ ಸಮೇತರಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳಿದ್ದಾರೆ. ಬೆಂಗಳೂರಿನ ಹೆಚ್ಎಎಲ್ ವಿಮಾನನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಅವರು, ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದರು.
ಅಯೋಧ್ಯೆಯ ಶ್ರೀ ರಾಮನ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವ ಅತೀವ ಸಂತಸ ತಂದಿದೆ. ಇಂದು ಹಿಂದೂಗಳ ಪವಿತ್ರ ಸ್ಥಳವಾಗಿ ಮಾರ್ಪಾಡು ಆಗುವುದರಲ್ಲಿ ಅನುಮಾನವಿಲ್ಲ. ನಾನು ಕೂಡ ದೈವಭಕ್ತ. ಹೀಗಾಗಿ ಅಲ್ಲಿಗೆ ಹೋಗುತ್ತಿದ್ದೇನೆ. ನಾನು ನನ್ನ ಪತ್ನಿ ಚೆನ್ನಮ್ಮ, ಪುತ್ರ ಹೆಚ್.ಡಿ. ಕುಮಾರಸ್ವಾಮಿ, ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪ್ರಯಾಣ ಬೆಳೆಸುತ್ತಿದ್ದೇವೆ ಎಂದರು.
ಇನ್ನು ನನಗಿಂತಲೂ ನರೇಂದ್ರ ಮೋದಿ ದೈವಭಕ್ತ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ್ರು ತಿಳಿಸಿದ್ದು, ನಾನು ದೈವಭಕ್ತನೇ. ಆದ್ರೆ, ನರೇಂದ್ರ ಮೋದಿ ನನಗಿಂತ ದೈವಭಕ್ತ. ಕಳೆದ 11 ದಿನಗಳಿಂದಲೂ ವ್ರತ ಆಚರಣೆ ಮಾಡುತ್ತಾ, ಉಪವಾಸ ಸೇರಿದಂತೆ ನಾಳೆ ಸರಯೂ ನದಿಯಲ್ಲಿ ಸ್ನಾನ ಮುಗಿಸಿ, ರಾಮನ ದರ್ಶನ ಮಾಡಲಿದ್ದಾರೆ. ಅವರ ನನಗಿಂತ ದೈವಭಕ್ತರು ಎಂದು ದೇವೇಗೌಡರು ಪ್ರಧಾನಿಗಳನ್ನು ಹಾಡಿ ಹೊಗಳಿದ್ದಾರೆ.