LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ʼವಿಜಯೇಂದ್ರನನ್ನು ಬದಲಾವಣೆ ಮಾಡಬಹುದು ಎಂಬ ಭ್ರಮೆಯಲ್ಲಿರುವವರಿಗೆ ನಿರಾಶೆಯಾಗಲಿದೆʼ

ಬೆಂಗಳೂರು: ನನ್ನ ಮೌನವನ್ನು ದೌರ್ಬಲ್ಯವೆಂದು ಭಾವಿಸಬೇಡಿ, ವಿಜಯೇಂದ್ರನನ್ನು ಬದಲಾವಣೆ ಮಾಡಬಹುದು ಎಂಬ ಭ್ರಮೆಯಲ್ಲಿರುವವರಿಗೆ ನಿರಾಶೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಶನಿವಾರ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲರನ್ನು ಕರೆದುಕೊಂಡು ಹೋಗಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಪಕ್ಷದ ಕೇಂದ್ರ ನಾಯಕರು ನನ್ನ ಪ್ರಯತ್ನದಿಂದ ತೃಪ್ತರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಗನಾಗಿರುವುದೇ ಅಪರಾಧ ಎಂಬ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದು, ಮುಂದಿನ ದಿನಗಳಲ್ಲಿ ಉತ್ತರ ನೀಡುತ್ತೇವೆಂದು ಹೇಳಿದರು.

ಇದೇ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ದೆಹಲಿಗೆ ತೆರಳಿ ದೂರು ಕೊಡುತ್ತಿಲ್ಲ. ಕೇಂದ್ರ ನಾಯಕರು ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದಾರೆ, ದಿನನಿತ್ಯ ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದು, ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಅವರದೇ ಆದ ರೀತಿಯಲ್ಲಿ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.

ದೆಹಲಿಯಲ್ಲಿ ಪಕ್ಷದ ಕೇಂದ್ರ ನಾಯಕರನ್ನು ಭೇಟಿ ಮಾಡಿದ್ದೇನೆ. ದೆಹಲಿ ಮತ್ತು ರಾಜ್ಯದ ಮೂರು ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆ ಫಲಿತಾಂಶಗಳ ಬಗ್ಗೆ ರಾಜ್ಯದಲ್ಲಾಗುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಗಮನಕ್ಕೆ ತಂದಿದ್ದೇನೆ. ಕೆಲವರ ನಡವಳಿಕೆಯಿಂದ ಅವರು ಎತ್ತರಕ್ಕೆ ಬೆಳೆಯುವ ಭ್ರಮೆಯಲ್ಲಿದ್ದರೆ, ಅದು ಖಂಡಿತ ಸಾಧ್ಯವಿಲ್ಲ. ನನ್ನ ಮೌನವನ್ನು ದೌರ್ಬಲ್ಯವೆಂದು ಪರಿಗಣಿಸಿದರೆ ಅದು ತಪ್ಪು. ಕಾರ್ಯಕರ್ತರು ಕೂಡ ಹಿಡಿಶಾಪ ಹಾಕುತ್ತಿದ್ದಾರೆ. ಇದೆಲ್ಲಕ್ಕೂ ಇತಿಶ್ರೀ ಹಾಡಬೇಕೆಂಬ ಅಪೇಕ್ಷೆ ಕಾರ್ಯಕರ್ತರಲ್ಲೂ ಇದೆ. ಯಾರ ಗಮನಕ್ಕೆ ತರಬೇಕೋ ಅದನ್ನು ತಂದಿದ್ದೇನೆಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು