LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಅಕ್ಟೋಬರ್ ಅಂತ್ಯದೊಳಗೆ ಚನ್ನರಾಯಪಟ್ಟಣ ರೈತರ ಸಮಸ್ಯೆ ಬಗೆಹರಿಸುತ್ತೇವೆ: ಸಿಎಂ

ಚನ್ನರಾಯಪಟ್ಟಣ: ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರ ನಿಯೋಗದೊಂದಿಗೆ, ಮುಖ್ಯ ಮಂತ್ರಿಗಳು, ಉಸ್ತುವಾರಿ ಸಚಿವರು ಮತ್ತು ಬೃಹತ್ ಕೈಗಾರಿಕಾ ಸಚಿವರು ಸಭೆ ನಡೆಸಿ ಅಕ್ಟೋಬರ್ ಅಂತ್ಯದೊಳಗೆ ರೈತರ ಸಮಸ್ಯೆಯನ್ನು ಬಗೆಹರಿಸುವ ತೀರ್ಮಾನಕ್ಕೆ ಬದಲಾಗುವುದು ಎಂದಿದ್ದಾರೆ.

ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸೇರಿದ್ದ ಸಭೆಯಲ್ಲಿ ಕರ್ನಾಟಕ ಪ್ರಾಂತ್ಯ ರೈತ ಸಂಘದ ಜಿಸಿ ಬಯ್ಯಾರೆಡ್ಡಿ ಮಾತನಾಡಿ ಇದಾಗಲೇ ಚನ್ನರಾಯಪಟ್ಟಣ ಹೋಬಳಿಯಲ್ಲಿ 4 ಬಾರಿ ಭೂಸ್ವಾಧೀನ ಮಾಡಿಕೊಂಡಿದ್ದು ಇದಾಗಲೇ ಬಹುಪಾಲು ಭೂಮಿ ಕಳೆದುಕೊಂಡಿದ್ದಾರೆ. ಉಳಿದಿರುವುದು ಅಲ್ಪಸ್ವಲ್ಪ ಭೂಮಿ ಮಾತ್ರ. ಈ ಭೂಮಿಯನ್ನು ಸ್ವಾದೀನ ಪ್ರಕ್ರಿಯೆಯಿಂದ ಕೈಬಿಡಲೇಬೇಕು ಎಂದು ಒತ್ತಾಯಿಸಿ ವಿರೋಧ ಪಕ್ಷದಲ್ಲಿ ಇದ್ದಾಗ ಧರಣಿ ಸ್ಥಳಕ್ಕೆ ಬಂದು ರೈತರ ಪರ ನಿಲ್ಲುವುದಾಗಿ ಬರವಸೆ ನೀಡಿದ್ದೀರಿ ಎಂದು ನೆನಪು ಮಾಡಿದರು.

ಜೊತೆಗೆ ಕರ್ನಾಟಕ ರಾಜ್ಯ ರೈತಸಂಘದ ಬಡಗಲಪುರ ನಾಗೇಂದ್ರ, ಹೋರಾಟ ಸಮಿತಿಯ ಕಾರಳ್ಳಿ ಶ್ರೀನಿವಾಸ್, ಮಾರೇಗೌಡ ಕೂಡ ದ್ವನಿಗೂಡಿಸಿ, ಅದೇ ಭೂಮಿಯಲ್ಲಿ ಬೆಂಗಳೂರಿಗೆ ಬೇಕಾದ ಹಣ್ಣು ತರಕಾರಿ, ಹೂವು ಎಲ್ಲವನ್ನೂ ಬೆಳೆಯುತ್ತಿದ್ದೇವೆ ಮತ್ತು ವಾಸದ ಮನೆಗಳು, ಕೋಳಿಪಾರಂ ಸೇರಿದಂತೆ ಸುಮಾರು ಆರ್ಥಿಕ ಚಟುವಟಿಕೆಗಳು ಕೂಡ ಇದೇ ಭೂಮಿಯಲ್ಲಿ ನಡೆಯುತ್ತಿವೆ ಆದ್ದರಿಂದ ಭೂಮಿಯನ್ನು ಸ್ವಾಧೀನದಿಂದ ಕೈಬಿಟ್ಟು ರೈತರನ್ನು ರಕ್ಷಿಸಬೇಕು ಎಂದ್ದು ಮಾತನಾಡಿದರು.

ಮುಂದಿನ ದಿನಾಂಕವನ್ನು ಇಂದೇ ನಿಗದಿಪಡಿಸಿ ಎಂದು ರೈತರು ಪಟ್ಟುಹಿಡಿದಾಗ ಮುಖ್ಯಮಂತ್ರಿಗಳು ದಸರ ಹಬ್ಬದ ನಂತರ ತಿಂಗಳ ಕೊನೆಯೊಳಗೆ ಒಂದು ದಿನಾಂಕ ನಿಗದಿಪಡಿಸಿ ತಿಳಿಸಲಾಗುವುದು ಎಂದು ಹೇಳಿದರು.ಸಭೆಯಲ್ಲಿ, ಕರ್ನಾಟಕ ಪ್ರಾಂತ್ಯ ರೈತಸಂಘದ ಪ್ರಭಾ ಬೆಳವಂಗಲ, ಚಂದ್ರ ತೇಜಸ್ವಿ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ನಂಜಪ್ಪ, ಅಶ್ವತ್ಥಪ್ಪ. ರಾಮಚಂದ್ರಪ್ಪ, ಗೋಪಿನಾಥ್, ರಮೇಶ್ ಚೀಮಾಚನಹಳ್ಳಿ, ಮುಕುಂದ, ಪ್ರಮೋದ್, ವೆಂಕಟೇಶಪ್ಪ,ಪ್ರಕಾಶ್ ಸೇರಿದಂತೆ ಹಲವು ರೈತ ಮುಖಂಡರು ಭಾಗಿಯಾಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು